Advertisement

ಸಿಎಂ ಬದಲಾವಣೆ ಖಚಿತ ಎನ್ನುವ ಸಿದ್ದರಾಮಯ್ಯ ಜ್ಯೋತಿಷಿಯಾಗಿದ್ದು ಯಾವಾಗ? ಸಚಿವ ಬಿ‌ ಎ. ಬಸವರಾಜ

01:26 PM Jan 07, 2021 | Team Udayavani |

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಹೇಳುವುದಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ನಗರಾಭಿವೃದ್ಧಿ ಸಚಿವ ಬಿ‌ಎ. ಬಸವರಾಜ ಪ್ರಶ್ನಿಸಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಧಿ ಮುಗಿಯುವವರೆಗೂ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಅನುಮಾನ ಬೇಡ ಎಂದರು.

ಸಿಎಂ ಉತ್ತಮ ಕಾರ್ಯನಿರ್ವಹಣೆ ತೋರುತ್ತಿದ್ದು, ಸಮರ್ಥ ಆಡಳಿತ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಎನ್ನುವುದು ಕಾಂಗ್ರೆಸ್ಸಿಗರ ಕನಸು ಎಂದರು.

ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಗಳ ಪರಮಾಧಿಕಾರ. ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಿಎಂ ಶೀಘ್ರ ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿ ಸೇರಿದ ಎಲ್ಲರಿಗೂ ಸಚಿವ ಸ್ಥಾನ ದೊರೆಯಲಿದೆ ಎಂದರು.

ಇದನ್ನೂ ಓದಿ:ಜಾಡ್ಸಿ ಒದ್ದರೆ… : ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾನೂನು ಸಚಿವರ ನೀತಿ ಪಾಠ!

Advertisement

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾವು ಯಾರು ಬಿಜೆಪಿ ಬಿಡುವ, ಮತ್ತೆ ಕಾಂಗ್ರೆಸ್ ಗೆ ಮರಳುವ ಪ್ರಶ್ನೆಯೇ ಇಲ್ಲ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಭ್ರಮೆಯಷ್ಟೆ ಎಂದರು.

ಬಸವರಾಜ ಹೊರಟ್ಟಿಯವರು ಒಳ್ಳೆ ಸ್ನೇಹಿತರು. ಅವರು ಸಭಾಪತಿ ಆಗುವುದಕ್ಕೆ ನಮ್ಮ ಬೆಂಬಲ ಇರುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next