Advertisement

ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ವಿಸ್ತರಣೆ ಎಂದು?

11:46 PM Jun 20, 2019 | mahesh |

ಗುತ್ತಿಗಾರು: ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ವಿಸ್ತರಣೆ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

Advertisement

ಪ್ರಸಿದ್ಧ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖೀಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವು ಮುರುವಿನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಧುತ್ತೆಂದು ಎದುರಾಗಿ ಅಪಘಾತಗಳೂ ಸಂಭವಿಸಿವೆ.

ಕಡತದಲ್ಲಿಯೇ ಬಾಕಿ
ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ವಿಸ್ತರಣೆಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು, ಎರಡು ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರು ಗೊಳ್ಳದೆ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀ.ನಷ್ಟು ವಿಸ್ತರಣೆ ಮಾಡಲು ಈ ಹಿಂದೆ ಸಿಆರ್‌ಎಫ್ನಿಂದ 3 ಕೋಟಿ ರೂ. ಮಂಜೂರುಗೊಂಡು ಟೆಂಡರ್‌ ಪ್ರಕ್ರಿಯೆಯೂ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್‌ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್‌ ಮಾಡಬೇಕಿದೆ.

ಸೇವಾಜೆಯಲ್ಲಿ ಸೇತುವೆ
ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು, ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಎಂಜಿನಿಯರ್‌ ಸಣ್ಣೇ ಗೌಡ ತಿಳಿಸಿದ್ದಾರೆ.

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ. ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿ.ಮೀ.ನಷ್ಟು ಉಳಿತಾಯ ಆಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ಪ್ರಸ್ತಾವನೆ ಕಳಿಸಿದ್ದೇವೆ

ರಸ್ತೆ ವಿಸ್ತರಣೆಗೆ 2 ವರ್ಷಗಳ ಹಿಂದೆಯೇ ಪ್ರಸ್ತಾವನೆ ಕಳಿಸಲಾಗಿದೆ. ಸಿಆರ್‌ಎಫ್ನಿಂದ 3 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಹೆದ್ದಾರಿ ಪ್ರಾಧಿಕಾರದಿಂದ 5 ಕಿ.ಮೀ. ರಸ್ತೆ ವಿಸ್ತರಣೆಗೊಳ್ಳುವ ಸಾಧ್ಯತೆಯಿದೆ.
– ಸಣ್ಣೇಗೌಡ, ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಸುಳ್ಯ ವಿಭಾಗ

15 ಕಿ.ಮೀ. ಉಳಿಕೆ
ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ. ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿ.ಮೀ.ನಷ್ಟು ಉಳಿತಾಯ ಆಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ರಿಟೆಂಡರ್‌ ಆಗಬೇಕಿದೆ

ರಸ್ತೆ ವಿಸ್ತರಣೆಗೆ ಪ್ರಯತ್ನ ಮಾಡಲಾಗುತ್ತಿದ್ದು, ಗುತ್ತಿಗೆದಾರರ ಸಮಸ್ಯೆಯಿಂದ ಕಾಮಗಾರಿ ಬಾಕಿಯಾಗಿದೆ. ಕಾಮಗಾರಿಗಾಗಿ ರಿಟೆಂಡರ್‌ ಆಗಬೇಕಿದೆ.
– ಹರೀಶ್‌ ಕಂಜಿಪಿಲಿ, ಜಿ.ಪಂ. ಸದಸ್ಯರು, ಅರಂತೋಡು ಕ್ಷೇತ್ರ
Advertisement

••ಕೃಷ್ಣಪ್ರಸಾದ್‌ ಕೊಲ್ಚಾರ್‌

Advertisement

Udayavani is now on Telegram. Click here to join our channel and stay updated with the latest news.

Next