Advertisement
ಪಟ್ಟಣದ ಶ್ರೀಮತಿ ಬಸಮ್ಮ ಯಜಮಾನ್ ಮರಿಚನ್ನಪ್ಪ ಸಮುದಾಯ ಭವನದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಬಿಜೆಪಿ ಯುವ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ರಾಜ್ಯ ಬಿಜೆಪಿ ಮುಖಂಡ ಬಿ.ಎನ್.ಗೋಪಾಲಗೌಡ ಮಾತನಾಡಿ, ಬಿ.ಎನ್.ಬಚ್ಚೇಗೌಡರು 5 ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿದ್ದರು. ಆ ವೇಳೆ ಹೊಸಕೋಟೆ ಪಟ್ಟಣದಲ್ಲಿ ಕೊಳವೆಬಾವಿಗಳನ್ನು ಕೊರೆಸಿ ಕುಡಿಯುವ ನೀರಿನ ಸಮಸ್ಯೆ ನೀಗಿಸಿದ್ದಾರೆ. ವಿಜಯಪುರ ಪಟ್ಟಣದಲ್ಲಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ 80 ಕೊಳವೆಬಾವಿಗಳನ್ನು ಕೊರೆಸಿದ್ದರು.
ಅಲ್ಲಿಂದೀಚೆಗೆ ಕೊಳವೆಬಾವಿಗಳ ನೀರು ಬಳಸಲಾಗದೇ ಪಟ್ಟಣದ ಜನತೆ ನೀರಿನ ಸಮಸ್ಯೆ ಎದುರಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಚ್ಚಿದಾನಂದಮೂರ್ತಿ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಇಡೀ ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಸ್ಥಾಪಿಸಿ, ಆರ್ಥಿಕತೆಯನ್ನು ಉತ್ತುಂಗ ಶಿಖರಕ್ಕೆ ಕೊಂಡೊಯ್ದರು.
ನೆರೆಹೊರೆ ರಾಷ್ಟ್ರಗಳ ಉಪಟಳ ನಿವಾರಣೆಯಲ್ಲಿ ಮೋದಿಯವರ ನಡೆ ಉತ್ತಮವಾಗಿದ್ದು, ರಾಷ್ಟ್ರದ ರಕ್ಷಣಾ ವಿಚಾರದಲ್ಲಿ ಬಿಜೆಪಿ ಉತ್ತಮ ಕ್ರಮಗಳನ್ನು ಅನುಸರಿಸಿದೆ ಎಂದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್ಎಲ್ಎನ್ ಅಶ್ವತ್ಥನಾರಾಯಣ್, ರಾಮಚಂದ್ರಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಸಿ.ನಾಗರಾಜಗೌಡ, ಉಪಾಧ್ಯಕ್ಷ ಎನ್.ಕನಕರಾಜು, ಪುರಸಭಾ ಸದಸ್ಯ ಬಲಮುರಿ ಜಿ.ಶ್ರೀನಿವಾಸಮೂರ್ತಿ,
ಟೌನ್ ಬಿಜೆಪಿ ಅಧ್ಯಕ್ಷ ಚ.ವಿಜಯಬಾಬು, ಕಾರ್ಯದರ್ಶಿ ರವಿಕುಮಾರ್, ಮಾಜಿ ಅಧ್ಯಕ್ಷ ಜಿ.ಕೆ.ರಾಮು ಭಗವಾನ್, ರಾಮಕೃಷ್ಣ ಹೆಗಡೆ, ನರಸಿಂಹಮೂರ್ತಿ ಮತ್ತಿತರರಿದ್ದರು. ಇದೇ ವೇಳೆ ಅನೇಕ ಮಂದಿ ಯುವಕರು ವಿವಿಧ ಪಕ್ಷಗಳನ್ನು ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದರು. ಕೆಲವರು ಉಚಿತ ಕರೆ ಮಾಡಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.