Advertisement

ಮಧುವನ ರೈಲ್ವೇ ಮೇಲ್ಸೇತುವೆ ದುರಸ್ತಿ ಯಾವಾಗ?

06:10 AM Jul 28, 2018 | Team Udayavani |

ಕೋಟ: ಮಧುವನ ರೈಲ್ವೇ ಮೇಲ್ಸೇತುವೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಹೊಂಡಗಳು ಸೃಷ್ಟಿಯಾಗಿ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಂಚರಿಸಲು ಸಮಸ್ಯೆಯಾಗುತ್ತಿದೆ. ಈ ಕುರಿತು ಉದಯವಾಣಿ ಹಲವು ಬಾರಿ ವರದಿ ಪ್ರಕಟಿಸಿತ್ತು. ಆದರೆ ಇದುವರೆಗೆ ಸಂಬಂಧಪಟ್ಟ ಇಲಾಖೆ ದುರಸ್ತಿಗೆ ಮುಂದಾಗಿಲ್ಲ.

Advertisement

ಇಲ್ಲಿ ಸೇತುವೆಯ ಮಧ್ಯ ಭಾಗ ತಗ್ಗಾಗಿರುವುದರಿಂದ ಹಾಗೂ ನೀರು ಹೊರಗಡೆ ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಹೊಂಡಗಳು ಸೃಷ್ಟಿಯಾಗುತ್ತದೆ. ಕಳೆದ ವರ್ಷ  ರಸ್ತೆ ದುರಸ್ತಿಗೊಳಿಸುವ ಸಂದರ್ಭ ಡಾಮರೀಕರಣ ಕೈಗೊಂಡರೂ ಈ ಬಾರಿ ಸಮಸ್ಯೆ ಮುಂದುವರಿದಿದೆ.

ಪ್ರತಿಭಟನೆಗೆ ಸಿದ್ಧತೆ
ಸಮಸ್ಯೆಯ ವಿರುದ್ಧ ಕಳೆದ ವರ್ಷ ಸ್ಥಳೀಯರು ಗಿಡ ನೆಡುವ ಮೂಲಕ ಪ್ರತಿಭಟನೆ ನಡೆಸಿದ್ದರು.  ಈ ಬಾರಿ ಕೂಡ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದ್ದು, ಆದಷ್ಟು ಶೀಘ್ರ ಇದರ ದುರಸ್ತಿ ಕುರಿತು ಕ್ರಮಕೈಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next