Advertisement

ವಿಜಯನಗರ ಹೊಸ ಜಿಲ್ಲೆ ಆದಾಗ ಪ್ರತಿಯೊಬ್ಬರು ಸ್ವಾಗತಿಸಬೇಕು: ಅಶ್ವತ್ಥನಾರಾಯಣ್

08:22 PM Sep 29, 2019 | Sriram |

ಚಿಕ್ಕಬಳ್ಳಾಪುರ: ಹೊಸ ಜಿಲ್ಲೆಯಾಗಿ ರೂಪುಗೊಳ್ಳಲಿರುವ ವಿಜಯನಗರ ಜಿಲ್ಲೆಯನ್ನು ಪ್ರತಿಯೊಬ್ಬರು ಸ್ವಾಗತಿಸಬೇಕೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದರು.

Advertisement

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮಕ್ಕೆ ಭಾನುವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯನಗರಕ್ಕೆ ಐತಿಹಾಸಿಕ ಹಿನ್ನಲೆ ಇದೆ. ವಿಜಯ ನಗರ ಎಂದರೆ ಪ್ರತಿಯೊಬ್ಬರು ಹೆಮ್ಮೆ ಪಡುವ ವಿಚಾರ. ಇದಕ್ಕೆ ಯಾರು ಅಡಚಣೆ ಅಥವಾ ಅಪಸ್ವರ ತೆಗೆಯುವುದು ಬೇಡ. ಆ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಒಂದು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದರು.

15 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷ ಸಿದ್ದವೆಂದ ಅವರು, ಅನರ್ಹ ಶಾಸಕರು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆಂದರು. ಅನರ್ಹ ಶಾಸಕರ ದಾರಿ ಅವರದು ನಮ್ಮ ದಾರಿ ನಮ್ಮದು ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಡಿಸಿಎಂ ಅಶ್ವತ್ಥನಾರಾಯಣ್ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next