Advertisement

ಜುಲೈ ಮುಗಿದಿದೆ,ಲಸಿಕೆಗಳ ಕೊರತೆ ಇನ್ನೂ ನೀಗಿಲ್ಲ : ಕೇಂದ್ರದ ವಿರುದ್ಧ ರಾಹುಲ್ ಟ್ವೀಟಾಸ್ತ್ರ

10:58 AM Aug 01, 2021 | Team Udayavani |

ನವ ದೆಹಲಿ : ಮೂರನೇ ಅಲೆಯ ಭೀತಿಯಿಂದ ದೇಶದಲ್ಲಿ ಮತ್ತೆ ಕೋವಿಡ್ ಲಸಿಕೆಯ ಹಾಹಾಕಾರ ಎದ್ದಿದೆ. ದೇಶದ ಹಲವು ರಾಜ್ಯಗಳಲ್ಲಿ ಲಸಿಕೆಯ ಕೊರತೆ ಇದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

Advertisement

ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದವರು ಈಗ ಎರಡನೇ ಡೋಸ್ ಪಡೆಯುವುದಕ್ಕೆ ಅರ್ಹತೆಯನ್ನು ಪಡೆದಿದ್ದಾರೆ, ಇನ್ನೂ ಕೂಡ ಕೆಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆಯ ಕೊರತೆ ನೀಗಿಲ್ಲ ಎಂದು, ಬೇಕಾದಷ್ಟು ಲಸಿಕೆಗಳು ರಾಜ್ಯಗಳಿಗೆ ಪೂರೈಕೆಯಾಗುತ್ತಿಲ್ಲ.

ಇದನ್ನೂ ಓದಿ :  ಸತತ 5ನೇ ದಿನವೂ ಕೋವಿಡ್ ಪ್ರಕರಣ ಹೆಚ್ಚಳ.! ಕಳೆದ 24 ಗಂಟೆಗಳಲ್ಲಿ 41, 831 ಪ್ರಕರಣಗಳು ಪತ್ತೆ

ಈ ಹಿನ್ನೆಲೆಯಲ್ಲಿ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್, ಜುಲೈ ಮುಗಿದು ಹೋಗಿದೆ, ಇನ್ನೂ ಲಸಿಕೆ ಕೊರತೆ ನೀಗಿಲ್ಲ ಎಂದು ಲಸಿಕೆಯ ಕೊರತೆಯ ವಿಸ್ತೃತ ವರದಿಯ ವೀಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾರೆ.


ಈ ಹಿಂದೆ ಆರೋಗ್ಯ ಸಚಿವಾಲಯದ ಸುದ್ದಿಗೋಷ್ಟಿಯಲ್ಲಿ ಕೇಂದ್ರದ ಸರ್ಕಾರದ ಮಾಜಿ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಜುಲೈ ಅಂತ್ಯದೊಳಗೆ ದೇಶದ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಕೋವಿಡ್ ಲಸಿಕೆಗಳನ್ನು ಪೂರೈಸಲಾಗುತ್ತದೆ ಎಂದು ಭರವಸೆಯನ್ನು ನೀಡಿದ್ದರು.

Advertisement

ಕೇಂದ್ರ ಸರ್ಕಾರ ಭರವಸೆ ಈಡೇರದ ಹಿನ್ನೆಲೆಯಲ್ಲಿ ಹಾಗೂ ದೇಶದಾದ್ಯಂತಯ ಕೋವಿಡ್ ಲಸಿಕೆಗಳ ಕೊರತೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ಟ್ವೀಟ್ಬಾಣ ಬಿಟ್ಟಿದ್ದಾರೆ.

ಇದನ್ನೂ ಓದಿ : ಗಾಯಗೊಂಡರೂ ಹೋರಾಡಿದ ಬಾಕ್ಸರ್ ಸತೀಶ್ ಕುಮಾರ್ ಗೆ ಸೋಲು

Advertisement

Udayavani is now on Telegram. Click here to join our channel and stay updated with the latest news.

Next