Advertisement

ಕಾಂಗ್ರೆಸ್‌ ಎಲ್ಲಿದೆ ಎಂದು ಹುಡುಕುವ ಪರಿಸ್ಥಿತಿ :ಕೃಷ್ಣ ವಾಗ್ದಾಳಿ

02:50 PM Apr 03, 2017 | Team Udayavani |

 ನಂಜನಗೂಡು: 55 ವರ್ಷಗಳ ರಾಜಕೀಯ ಜೀವನದಲ್ಲಿ  ರಾಜ್ಯದಲ್ಲಿ ಈಗಿರುವ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ನಾಯಕ, ಮಾಜಿ ಸಿಎಂ ಎಸ್‌.ಎಂ.ಕೃಷ್ಣ  ತೀವ್ರ ವಾಗ್ದಾಳಿ ನಡೆಸಿದ್ದಾರೆ. 

Advertisement

ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ  ರಾಜಕೀಯ ಧ್ರುವೀಕರಣ ಆಗುತ್ತಿದೆ. ಅದರ ಭಾಗವಾಗಿಯೇ ನಾನು ಬಿಜೆಪಿ ಸೇರಿದ್ದೇನೆ. ಅಧಿಕಾರದ ಆಸೆಯಿಂದ ಬಿಜೆಪಿ ಸೇರಿಲ್ಲ,ಯಾವುದೇ ಬೇರೆ ರಾಜ್ಯದಿಂದ ರಾಜ್ಯಸಭೆಗೆ ಹೋಗಿಲ್ಲ ಎಂದರು. 

ರಾಜ್ಯ ಸರ್ಕಾರ ಎಂದರೆ ಹೊತ್ತು ಮುಳುಗುವ ಹೊತ್ತಿಗೆ ಬಾಗಿಲು ಹಾಕಿ ತೆರೆಯುವುದಲ್ಲ. ಈಗ ಸರ್ಕಾರ ಒಂದು ಅಂದಾಜಿನ ಮೇಲೆ ನಡೆಯುತ್ತಿದೆ ಎಂದರು. 

ಪ್ರಪಂಚದಲ್ಲೇ ಮೋದಿ ಅತ್ಯುತ್ತಮ ನಾಯಕ . ಬಿಜೆಪಿಗೆ ಭವಿಷ್ಯದಲ್ಲಿ ಉತ್ತಮ ದಿನಗಳಿವೆ. ಸದ್ಯ ದೇಶದ ಇತರೆಡೆಗಳಲ್ಲಿ ಕಾಂಗ್ರೆಸ್‌ ಎಲ್ಲಿದೆ ಎಂದು ಹುಡುಕುವ ಪರಿಸ್ಥಿತಿ ಇದೆ ಎಂದರು. 

ಇದೇ ವೇಳೆ ಅಂಬರೀಷ್‌ ಬಿಜೆಪಿ ಸೇರ್ಪಡೆ ಕುರಿತು ನನಗೆ ಮಾಹಿತಿ ಇಲ್ಲ ಎಂದರು.

Advertisement

ಕೃಷ್ಣ ಅವರು ನಂಜನಗೂಡಿನಲ್ಲಿ ಶ್ರೀನಿವಾಸ್‌ ಪ್ರಸಾದ್‌ ಪರ ಪ್ರಚಾರ ಸಭೆಯಲ್ಲಿ ಇದೇ ಮೊದಲ ಬಾರಿಗೆ ಪಾಲ್ಗೊಂಡು ಕಾಂಗ್ರೆಸ್‌ ವಿರುದ್ಧ  ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next