Advertisement

ರಾಜ್ಯದಲ್ಲಿ ಜೆಡಿಎಸ್‌ ಈಗ ಎಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ

11:30 PM Mar 15, 2024 | Team Udayavani |

ಬೆಂಗಳೂರು: ರಾಜ್ಯದ ಐದಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ನೇರ ಸ್ಪರ್ಧೆ ಇತ್ತು. ಆದರೆ ಈಗ ಜೆಡಿಎಸ್‌ ಎಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕುಟುಂಬವೇ ಬಿಜೆಪಿ ಸೇರುತ್ತಿದೆ. ಹೀಗಾದರೆ ನಮ್ಮ ಗತಿ ಏನು ಎಂದು ದಳದ ಕಾರ್ಯಕರ್ತರು ನಮ್ಮ ಪಕ್ಷದ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ ಎಂದರು.

ಬಿಜೆಪಿ, ಜೆಡಿಎಸ್‌ ನಾಯಕರು ನಮ್ಮ ವಿರುದ್ಧ ಹೋರಾಟ ಮಾಡಿದವರು. ಅವರೂ ಮುಂದಿನ ರಾಜಕೀಯ ಭವಿಷ್ಯವನ್ನು ನೋಡುತ್ತಾರಲ್ಲವೇ? ಎರಡೂ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್‌ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಡಿ.ಕೆ.ಸುರೇಶ್‌ಗೆ ನಾವು ತಕ್ಕಪಾಠ ಕಲಿಸುತ್ತೇವೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ಮೊದಲು ಅವರ ಪಕ್ಷದ ಪರಿಸ್ಥಿತಿ ಬಗ್ಗೆ ಮಾತನಾಡಲಿ. ದಳ ಇದೆಯೋ? ಇಲ್ಲವೋ ಎಂಬುದರ ಬಗ್ಗೆ ಮೊದಲು ಹೇಳಲಿ. ಅನಂತರ ಪ್ರಬಲ ಅಭ್ಯರ್ಥಿ ಬಗ್ಗೆ ಮಾತನಾಡಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next