Advertisement

ಸ್ವತ್ಛತೆ ಎಲ್ಲಿದೆಯೋ ಅಲ್ಲಿದೆ ಆರೋಗ್ಯ: ದೇಶಮುಖ

11:15 AM Sep 21, 2018 | Team Udayavani |

ಕಲಬುರಗಿ: ಸ್ವತ್ಛತೆ ಎಲ್ಲಿದೆಯೋ ಅಲ್ಲಿದೆ ಆರೋಗ್ಯ ಎನ್ನುವ ಮಾತಿನಂತೆ ಪ್ರತಿಯೊಬ್ಬರು ತಮ್ಮ ಮನೆ ಅಂಗಳ ಸ್ವತ್ಛವಾಗಿಟ್ಟುಕೊಂಡಲ್ಲಿ ಇಡೀ ಗ್ರಾಮವೇ ಸ್ವತ್ಛವಾಗುತ್ತದೆ. ಇದರಿಂದ ಗಾಂಧೀಜಿ ಕಂಡ ಕನಸು ನನಸಾಗುತ್ತದೆ ಎಂದು
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

Advertisement

ಭಾರತ ಸರಕಾರದ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಕಲಬುರಗಿ-ಬಳ್ಳಾರಿ, ಮಹಾನಗರ ಪಾಲಿಕೆ, ಶಿಶು ಅಭಿವೃದ್ಧಿ ಯೋಜನೆ (ನಗರ), ಗೋದುತಾಯಿ ದೂಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮತ್ತು ಪೂರ್ವ ಮಹಾವಿದ್ಯಾಲಯ, ಶರಣಬಸವೇಶ್ವರ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಹಾಗೂ ಸಂಯುಕ್ತ ಪದವಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸ್ವತ್ಛಭಾರತ
ಅಭಿಯಾನ (ನಗರ) ಕಾರ್ಯಕ್ರಮ ಮತ್ತು ಜಾಥಾ ಉದ್ಗಾಟಿಸಿ ಅವರು ಮಾತನಾಡಿದರು. ಸ್ವತ್ಛ ಪರಿಸರದಿಂದ ಜನರ ಆರೋಗ್ಯವು ಉತ್ತಮವಾಗಿರುತ್ತದೆ. ಅದಕ್ಕಾಗಿ ಎಲ್ಲರೂ ಸ್ವತ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಸ್ವತ್ಛ ಭಾರತ ಅಭಿಯಾನ ರಾಜ್ಯ ಸಂಯೋಜಕಿ ಅನ್ನಪೂರ್ಣ ಮಾತನಾಡಿ, ಸ್ವತ್ಛ ಭಾರತ ಅಭಿಯಾನದಡಿ ಪ್ರತಿ ಮನೆಗೊಂದು ಶೌಚಾಲಯ ಕಟ್ಟಿಸಲು ಸರಕಾರ ಬಡವರಿಗೆ ಹಾಗೂ ಹಿಂದುಳಿದ ಜನರಿಗೆ ಧನ ಸಹಾಯ ಮಾಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಕರೆ ನೀಡಿದರು.
 
ಜಿಪಂ ಜಿಲ್ಲಾ ಸಂಯೋಜಕಿ ಗುರುಬಾಯಿ ಪಾಟೇಲ ಮಾತನಾಡಿ, ನಾವೆಲ್ಲರೂ ಸ್ವತ್ಛ ಪರಿಸರ ನಿರ್ಮಿಸಬೇಕಾದರೆ ಪ್ರತಿಯೊಂದು ಕುಟುಂಬದವರು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಂಡು ಸ್ವತ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಕಲಬುರಗಿ ಶರಣಬಸವೇಶ್ವರ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಸಂಯುಕ್ತ ಪದವಿ ಕಾಲೇಜಿನ ಪ್ರಚಾರ್ಯ ಬಿ.ಸಿ. ಚವ್ಹಾಣ, ಗೋದುತಾಯಿ ದೂಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ನೀಲಾಬಿಕಾ ಪೊಲೀಸ್‌ ಪಾಟೀಲ ಸ್ವತ್ಛ ಭಾರತ ಅಭಿಯಾನ ಮತ್ತು ಪರಿಸರ ಸಂರಕ್ಷಣಿ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿನಿಯರಿಗೆ ಭಾಷಣ, ರಂಗೋಲಿ, ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಕಲಬುರಗಿ-ಬಳ್ಳಾರಿ ಉಪ ನಿರ್ದೇಶಕ ಜಿ.ಡಿ. ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳ್ಳಾರಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಸಹಾಯಕ ಎನ್‌. ರಾಮಕೃಷ್ಣ ಸ್ವಾಗತಿಸಿದರು, ಕಲಬುರಗಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಸಹಾಯಕ ನಾಗಪ್ಪ ಅಂಬಾಗೋಳ ವಂದಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next