Advertisement
ಬರಗಾಲದ ನೆಪವೊಡ್ಡಿ ಕಳೆದ ಆಗಸ್ಟ್ನಲ್ಲಿ ಜಿಲ್ಲಾಡಳಿತ ಆವರಣದಲ್ಲಿ ಸಸಿ ನೆಟ್ಟು ಸಾಂಕೇತಿಕವಾಗಿ ದಶಮಾನೋತ್ಸವ ಆಚರಿಸಿದ್ದ ಜಿಲ್ಲಾಡಳಿತ ಇದೀಗ ಫೆ. 2 ರಿಂದ 4 ರವರೆಗೂ 3 ದಿನಗಳ ಕಾಲ ಜಿಲ್ಲಾ ದಶಮಾನೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಆದ್ಧೂರಿ, ವೈಭವದಿಂದ ಆಚರಿಸಲು ತೀರ್ಮಾನಿಸಿದ್ದು, ಕಾರ್ಯಕ್ರಮಕ್ಕೆ ಕೋಟ್ಯಂತರ ರೂ. ವೆಚ್ಚ ಮಾಡುತ್ತಿರುವುದರಿಂದ ಜಿಲ್ಲಾಡಳಿತ ದಶಮಾನೋತ್ಸವದ ಹೆಸರಿನಲ್ಲಿ ದುಂದು ವೆಚ್ಚಕ್ಕೆ ಕೈ ಹಾಕಿದಿಯೇ ಎಂಬ ಅನುಮಾನ ಮೂಡಿದೆ. ಮೂಲಗಳ ಪ್ರಕಾರ ಜಿಲ್ಲಾಡಳಿತ 4 ಕೋಟಿ ರೂ. ಗೂ ಮೀರಿ ಹಣವನ್ನು ವೆಚ್ಚ ಮಾಡುತ್ತಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ.
Related Articles
Advertisement
ಕನ್ನಡ, ಸಂಸ್ಕೃತಿ ಇಲಾಖೆಯಿಂದಲೇ 50 ಲಕ್ಷಕ್ಕೆ ಪ್ರಸ್ತಾವನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒಂದರಿಂದಲೇ ಜಿಲ್ಲಾ ದಶಮಾನೋತ್ಸವಕ್ಕೆ 50 ಲಕ್ಷ ರೂ.ಕೋರಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಉಳಿ ದಂತೆ ಜಿಲ್ಲೆಯ ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ, ಶಿಕ್ಷಣ, ಕೈಗಾರಿಕೆ ಮತ್ತಿತರ ಇಲಾಖೆಗಳ ಮೂಲಕ ಎಷ್ಟು ಮೊತ್ತದ ಅನುದಾನದ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ.
ಯಾವ ಪುರುಷಾರ್ಥಕ್ಕೆ ದಶಮಾನೋತ್ಸವ?ಚಿಕ್ಕಬಳ್ಳಾಪುರ ಜಿಲ್ಲೆ ಕಳೆದ 10 ವರ್ಷಗಳಿಂದ ಹೇಳಿಕೊಳ್ಳುವ ಮಟ್ಟದಲ್ಲಿ ಅಭಿವೃದ್ಧಿ ಆಗಿಲ್ಲ. ಬರೀ ಕಟ್ಟಡಗಳು ತಲೆ ಎತ್ತಿರುವುದು ಬಿಟ್ಟರೆ ಇಲ್ಲಿನ ಜನರ ಜೀವನ ಮಟ್ಟ ಸುಧಾರಣೆ ಆಗಿಲ್ಲ. ಬಡತನ, ಅಸ್ಪೃಶ್ಯತೆ ಹಾಗೆ ಇದೆ. ಹೊಸ ಜಿಲ್ಲೆಗಳಾಗಿ ರೂಪಗೊಂಡ ಬೇರೆ ಜಿಲ್ಲೆಗಳು ದಶಮಾನೋತ್ಸವ ಆಚರಣೆ ಮಾಡುತ್ತಿಲ್ಲ. ಚಿಕ್ಕಬಳ್ಳಾಪುರದಲ್ಲಿ ಮಾತ್ರ ದಶಮಾನೋತ್ಸವ ಆಚರಣೆ ಏಕೆ ಬೇಕು?, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹೆಸರಿನಲ್ಲಿ ದುಂದು ವೆಚ್ಚ ಮಾಡುತ್ತಾರೆ. ಇದು ಮೊದಲು ನಿಲ್ಲಬೇಕು ಜಿ.ವಿ.ಶ್ರೀರಾಮರೆಡ್ಡಿ, ಮಾಜಿ ಶಾಸಕ ಕಾಗತಿ ನಾಗರಾಜ