Advertisement

ಕೆರೆಯಲ್ಲಿ ಕುರಿಗಳನ್ನು ತೊಳೆಯುತ್ತಿದ್ದಾಗ ಮೂವರು ನೀರುಪಾಲು

07:57 AM Apr 23, 2023 | Team Udayavani |

ಕುದೂರು: ಕೆರೆಯಲ್ಲಿ ಕುರಿಗಳನ್ನು ತೊಳೆಯುತ್ತಿದ್ದಾಗ ಒಂದೇ ಕುಟುಂಬದ ಮೂವರು ನೀರು ಪಾಲಾದ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯ ಬಿಸ್ಕೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮುತ್ತಸಾಗರ ಗ್ರಾಮದಲ್ಲಿ ಸಂಭವಿಸಿದೆ.

Advertisement

ಗೊಲ್ಲರಹಟ್ಟಿ ಗ್ರಾಮದ ನಾಗರಾಜು (30), ಜ್ಯೋತಿ (35) ಹಾಗೂ ಲಕ್ಷ್ಮೀ ದೇವಿ (22) ಮೃತಪಟ್ಟವರು. ಇವರು ಶನಿವಾರ ಬೆಳಗ್ಗೆ ಎಂದಿನಂತೆ ಕುರಿಗಳನ್ನು ತೊಳೆಯುತ್ತಿದ್ದಾಗ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾರೆ. ಮೊದಲು ನಾಗರಾಜು ಮುಳುಗಿದ್ದು, ಆತನನ್ನು ರಕ್ಷಿಸಲು ತೆರಳಿದ್ದ ಜ್ಯೋತಿ ಮತ್ತು ಲಕ್ಷ್ಮೀ ದೇವಿಯೂ ನೀರುಪಾಲಾದರು ಎಂದು ತಿಳಿದುಬಂದಿದೆ. ಪಕ್ಕದಲ್ಲೇ ಕುರಿ ಮೇಯಿಸುತ್ತಿದ್ದ ವ್ಯಕ್ತಿ ಈ ದೃಶ್ಯವನ್ನು ಕಂಡು ಗ್ರಾಮಸ್ಥರಿಗೆ ತಿಳಿಸಿದ್ದು, ಬಳಿಕ ಅಗ್ನಿಶಾಮಕ ದಳ ಆಗಮಿಸಿ ಶವಗಳನ್ನು ಮೇಲೆತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next