Advertisement

Shivamogga: ಅನುಮಾನಾಸ್ಪದ ಬಾಕ್ಸ್ ನಲ್ಲಿ ಪತ್ತೆಯಾಗಿದ್ದು ಬಿಳಿ ಬಣ್ಣದ ಪೌಡರ್

10:16 AM Nov 06, 2023 | Team Udayavani |

ಶಿವಮೊಗ್ಗ: ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಎರಡು ಅನುಮಾನಾಸ್ಪದ ಬಾಕ್ಸ್ ಗಳನ್ನು ಬಾಂಬ್ ನಿಷ್ಕ್ರೀಯ ದಳ ಸ್ಫೋಟಿಸುವ ಮೂಲಕ ತೆರೆದಿದ್ದು, ಯಾವುದೇ ಸ್ಫೋಟಕಗಳು ಇರಲಿಲ್ಲ ಬದಲಾಗಿ ಅನುಮಾನಾಸ್ಪದ ಬಾಕ್ಸ್ ನಲ್ಲಿ ಪತ್ತೆಯಾಗಿರುವುದು ಉಪ್ಪು(table salt) ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

Advertisement

ಸಂಜೆ ಏಳು ಗಂಟೆಯಿಂದಲೇ ನಗರದಲ್ಲಿ ಮಳೆ ಶುರುವಾಗಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಮಧ್ಯರಾತ್ರಿ 2.40ರ ಸುಮಾರಿಗೆ ಒಂದು ಬಾಕ್ಸ್, 3.24 ಸುಮಾರಿಗೆ ಮತ್ತೊಂದು ಬಾಕ್ಸ್ ಬೀಗವನ್ನು ಸ್ಫೋಟಕ ಬಳಸಿ ತೆರೆಯಲಾಯಿತು. ಪ್ರತಿ ಬಾಕ್ಸ್ ನಲ್ಲೂ ಎರಡು ಚೀಲಗಳಲ್ಲಿ ಬಿಳಿ ಬಣ್ಣದ ಪೌಡರ್ ಮಾದರಿಯಲ್ಲಿ ಉಪ್ಪುನಂತಹ ವಸ್ತು ಇರುವುದು ತಿಳಿದು ಬಂದಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ನಮ್ಮ ಬಾಂಬ್ ನಿಷ್ಕ್ರೀಯ ದಳ ಯಶಸ್ವಿಯಾಗಿ ಬಾಕ್ಸ್ ಗಳನ್ನು ಓಪನ್ ಮಾಡಿದ್ದು ಅದರಲ್ಲಿ ಯಾವುದೇ ಸ್ಫೋಟಕ ಇರಲಿಲ್ಲ. ನಿರುಪಯುಕ್ತ ವಸ್ತು ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸತತ ಆರು ಗಂಟೆಗಳ ಕಾರ್ಯಾಚರಣೆ ಮೂಲಕ ಬಾಕ್ಸ್ ಓಪನ್ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ನಿಟ್ಟುಸಿರು ಬಿಟ್ಟರು.

Advertisement

ಎಂಎಲ್‌ಎ ಅನುಮಾನ:

ಬೀಗ ಒಡೆಯಲು ಸ್ಫೋಟಕ ಬಳಕೆ ಮಾಡಿದ್ದಾರೆ. ಒಂದೊಂದು ಟ್ರಂಕ್ ನಲ್ಲಿ ಎರಡೆರಡು ಬ್ಯಾಗ್ ಗಳಿವೆ. ಪೇಪರ್ ಹಾಕಿ ಕವರ್ ಮಾಡಿದ್ದಾರೆ. ಬಿಳಿ ಬಣ್ಣದ ಪೌಡರ್ ಪತ್ತೆಯಾಗಿದೆ. ವೈಟ್ ಪೌಡರ್ ಏಕೆ ಉಪಯೋಗಿಸುತ್ತಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.

ದೇವರು ದೊಡ್ಡವನು, ಈ ಹಂತದಲ್ಲಿ ತಡೆ ಹಿಡಿಯುವ ಪ್ರಯತ್ನ ಆಗಿದೆ. ಇದು ಯಾವ ಪೌಡರ್ ಎಂಬ ಬಗ್ಗೆ ರಿಪೋರ್ಟ್ ಬರಬೇಕು. ಇದು ಗಂಭೀರವಾದ ಸಂಗತಿ. ಬಹಳ ಭಾರ ಇದೆ. ಒಂದೊಂದು ಬ್ಯಾಗ್ ಬಹಳ ಭಾರ ಇದೆ. ಬಹಳ ಎಚ್ಚರಿಕೆ ವಹಿಸಬೇಕು. ಇದು ಮುಖಕ್ಕೆ ಹಚ್ಚುವ ಪೌಡರ್ ಅಂತೂ ಅಲ್ಲ. ರಾಜ್ಯ ಸರಕಾರ ಬಹಳ ಗಂಭೀರವಾಗಿ ಪರಿಗಣಿಸಬೇಕು.

ಸಿಕ್ಕಿಬಿದ್ದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸತ್ಯ ಸಂಗತಿ ಹೊರಬರಲಿ. ಮುಚ್ಚಿ ಹಾಕುವ ಪ್ರಯತ್ನ ಆಗಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next