ವಿಟ್ಲ: ಅನಂತಾಡಿ ಗ್ರಾಮದ ಬಾಕಿಲದಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನಿಸಿ, ಪತಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಂಪತಿ ನಡುವಿನ ಜಗಳವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.
ಮೃತ ಪ್ರತಾಪ್ (33) ಅವರ ಸಹೋದರ ಪ್ರದೀಪ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಅನಂತಾಡಿ ಗ್ರಾಮದ ಬಾಕಿಲ ನಿವಾಸಿ, ಖಾಸಗಿ ಬಸ್ ಚಾಲಕ ಪ್ರತಾಪ್ ಅವರು ಪತ್ನಿ ಮತ್ತು ಅವಳಿ ಮಕ್ಕಳೊಂದಿಗೆ ವಾಸವಾಗಿದ್ದು, ಇತ್ತೀಚೆಗೆ ದಂಪತಿ ನಡುವೆ ಆಗಾಗ ಜಗಳವಾಗುತ್ತಿ¤ತ್ತು ಎನ್ನಲಾಗಿದೆ. ಇದರಿಂದ ನೊಂದ ಪ್ರತಾಪ್ ಜು.1ರಂದುಮನೆಯ ಊಟದ ಕೋಣೆಯ ಸೀಲಿಂಗ್ ಫ್ಯಾನಿಗೆ ನೈಲಾನ್ ಸೀರೆಯಿಂದ ನೇಣು ಬಿಗಿದುಕೊಂಡಿದ್ದರು. ಪತಿ ನೇತಾಡುತ್ತಿರುವುದನ್ನು ಕಂಡ ಪತ್ನಿಯೂ ಇಸ್ತ್ರಿಪೆಟ್ಟಿಗೆಯ ವಯರ್ ಅನ್ನು ಅದೇ ಫ್ಯಾನಿಗೆ ಕಟ್ಟಿ ನೇಣು ಹಾಕಿಕೊಂಡಿದ್ದಾರೆನ್ನಲಾಗಿದೆ. ವಿಚಾರ ತಿಳಿದ ನೆರೆಕರೆಯವರು ಅವರಿಬ್ಬರನ್ನೂ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆ ವೇಳೆಗಾಗಲೇ ಪ್ರತಾಪ ಮೃತಪಟ್ಟಿದ್ದು ಅವರ ಪತ್ನಿ ವೀಣಾ ಮಂಗಳೂರಿನ ಆಸ್ಪತ್ರೆಯಲ್ಲಿ ಚೇತರಿಸುತ್ತಿದ್ದಾರೆ ಎನ್ನಲಾಗಿದೆ.
ಪ್ರತಾಪ್ ಸಾವಿನಲ್ಲಿ ಬೇರೆ ಯಾವುದೇ ಸಂಶಯ ಇಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.