Advertisement

ನನ್ನನ್ನು ಸರ್ಕಾರದಿಂದ ಕೈಬಿಡುವಷ್ಟು ಧೈರ್ಯ ಯಾರಿಗಿದೆ ಸ್ವಾಮಿ: ಅಬಕಾರಿ ಸಚಿವರ ಪ್ರಶ್ನೆ

12:08 PM Jan 11, 2021 | Team Udayavani |

ಬೆಂಗಳೂರು: ಈ ಸರ್ಕಾರ ರಚನೆಗೆ ನಾನೇ ಪ್ರಮುಖ ಕಾರಣ. ಸರ್ಕಾರ ಬರುವುದಕ್ಕೂ ನಾನೇ ಟರ್ನಿಂಗ್ ಪಾಯಿಂಟ್. ಹೀಗಾಗಿ ನನ್ನನ್ನು ಯಾವುದೇ ಕಾರಣಕ್ಕೂ ಕೈ ಬಿಡಲ್ಲ. ನನ್ನನ್ನು ಸರ್ಕಾರದಿಂದ ಕೈಬಿಡುವಷ್ಟು ಧೈರ್ಯ ಯಾರಿಗಿದೆ ಸ್ವಾಮಿ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದರು.

Advertisement

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಮಾಡಿರುವ ತೀರ್ಮಾನದ ಬಗ್ಗೆ ಮಾಹಿತಿ ಇಲ್ಲ. ಆದರೆ ಸಿಎಂ ಯಡಿಯೂರಪ್ಪ ಮಾತ್ರ ನನ್ನನ್ನು ಸಂಪುಟದಿಂದ ಕೈ ಬಿಡುವುದಿಲ್ಲ ಎಂದು ನಂಬಿಕೆಯಿದೆ ಎಂದರು.

ನಾನು ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದವನು. ಆಮೇಲೆ ಅಲ್ಲಿ ರಾಜೀನಾಮೆ ನೀಡಿ ಬಂದಿದ್ದವನು. ಆಗ ನನ್ನನ್ನು ಎಷ್ಟೋ ಜನರು ಏನೇನೋ ಟೀಕೆ ಮಾಡಿದ್ದರು. ಹೀಗಿದ್ದರೂ ನಾನು ಅಲ್ಲಿ ರಾಜೀನಾಮೆ ಕೊಟ್ಡು ಬಂದಿದ್ದೇನೆ. ನನ್ನ ತರ ಯಾರು ಮಾಡುತ್ತಾರೆ ಹೇಳಿ ಎಂದರು.

ಇದನ್ನೂ ಓದಿ:ಸಚಿವ ಸಂಪುಟ ಸರ್ಕಸ್ ನಲ್ಲಿ ‘ಏಳರಾಟ’: ಯಾರಿಗೆಲ್ಲಾ ಸಿಗಬಹುದು ಸಚಿವಗಿರಿ?

ಸಿಎಂ ಯಡಿಯೂರಪ್ಪ ಈ ಹಿಂದೆ ನನಗೆ ಮಾತು ಕೊಟ್ಟಿದ್ದಾರೆ. ಅವರು ಕೊಟ್ಟ ಮಾತಿನಂತೆ ಉಳಿಸುಕೊಳ್ಳುವ ನಂಬಿಕೆಯಿದೆ. ಈ ಬಗ್ಗೆ ಸಿಎಂ ಭೇಟಿ ಮಾಡಿ‌ ಚರ್ಚೆ ಮಾಡುತ್ತೇನೆ. ಹೈಕಮಾಂಡ್ ಏನು ಹೇಳಿದೆ ಎಂಬುದನ್ನು ತಿಳಿದುಕೊಳ್ಳುತ್ತೇನೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next