Advertisement

ಸಿಎಂ ಬದಲಾವಣೆ ಬಗ್ಗೆ ಮಾತನಾಡೋಕೆ ಸುರೇಶ್ ಗೌಡ ಯಾರು?: ಮಾಧುಸ್ವಾಮಿ‌ ಕಿಡಿ

03:24 PM Aug 12, 2022 | Team Udayavani |

ಬೆಂಗಳೂರು: ಸಿಎಂ‌ ಬದಲಾವಣೆ ಬಗ್ಗೆ ಮಾತನಾಡುವುದಕ್ಕೆ ಸುರೇಶ್ ಗೌಡ ಯಾರ್ರೀ?ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸಿಎಂ ಬದಲಾವಣೆ ಸಂಬಂಧ ಸುರೇಶ್ ಗೌಡ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸುರೇಶ್ ಗೌಡ ಯಾರ್ರೀ? ಒಬ್ಬ ಮಾಜಿ ಎಂಎಲ್ ಎಗೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಕೆಪಾಸಿಟಿ‌ ಇದೆಯೇನ್ರೀ ? ಹಾಗಾದರೆ ನಾವೆಲ್ಲ ಎಲ್ಲಿ ಹೋಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಬದಲಾವಣೆ ವಿಚಾರದಲ್ಲಿ ಯಾರೋ ಮಾತಾಡಿದ್ದಕ್ಕೆಲ್ಲ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ‌ ಮೋದಿ ಅಥವಾ ಅಮಿತ್ ಶಾ ಹೇಳಿಕೆ ನೀಡಿದ್ದರೆ ನಾವು‌ ಪ್ರತಿಕ್ರಿಯೆ ನೀಡಬಹುದು. ಅದನ್ನು ಬಿಟ್ಟು ಎಲ್ಲರ ಮಾತಿಗೆ, ಊಹಾಪೋಹಕ್ಕೆ‌ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಶಿಕ್ಷಕರ ನೇಮಕ ಕಾಯಿದೆ ತಿದ್ದುಪಡಿಗೆ ಅಸ್ತು: ವಯೋಮಿತಿ ಹೆಚ್ಚಳಕ್ಕೆ ಸಂಪುಟ ನಿರ್ಧಾರ

ಕೆಲ ದಿ‌ಗಳ ಹಿಂದೆ‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಮಾಜಿ ಶಾಸಕ ಸುರೇಶ್ ಗೌಡ‌‌ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನೀಡಿದ‌ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next