Advertisement

ನಿಖರ ಅಂಕಿ-ಅಂಶ ತಿಳಿಸಿದರೆ ಕೋಟಿ ರೂ!

07:25 PM May 17, 2019 | Hari Prasad |

ಬೆಂಗಳೂರು: ಲೋಕಸಭೆ ಚುನಾವಣೆಯ ಫ‌ಲಿತಾಂಶಕ್ಕೂ ಮುನ್ನ ಭವಿಷ್ಯ ನುಡಿಯುವ ಜ್ಯೋತಿಷಿಗಳು ವಿವಿಧ ಪಕ್ಷಗಳು ಗೆಲ್ಲುವ ಸ್ಥಾನಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳ ಬಗ್ಗೆ ನಿಖರವಾದ ಅಂಕಿ ಅಂಶ ತಿಳಿಸಿದರೆ ಒಂದು ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಅಖಿಲ ಕರ್ನಾಟಕ ವಿಚಾರವಾದಿ ಸಂಘ ಸವಾಲು ಹಾಕಿದೆ.

Advertisement

ಸಂಘದ ಅಧ್ಯಕ್ಷ ಎ.ಎಸ್‌.ನಟರಾಜ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2019ರ ಲೋಕಸಭಾ ಚುನಾವಣೆಯಲ್ಲಿ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ ಮತ್ತು ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ನಿಖರ ಅಂಕಿ ಅಂಶಗಳೊಂದಿಗೆ ಮೇ 20ರೊಳಗೆ ಸಂಘಕ್ಕೆ 10 ಸಾವಿರ ರೂ. ಭದ್ರತಾ ಠೇವಣಿ ಮೂಲಕ ವರದಿ ಸಲ್ಲಿಸಬೇಕು.

ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ಸರಿಯಾದ ವರದಿ ನೀಡಿದವರಿಗೆ ಫ‌ಲಿತಾಂಶ ಪ್ರಕಟವಾದ ನಂತರ ಒಂದು ಕೋಟಿ ರೂ. ಬಹುಮಾನ ನೀಡಲಾಗುವುದು. ಒಬ್ಬರಿಗಿಂತ ಹೆಚ್ಚು ಸ್ಪರ್ಧಿಗಳು ಸರಿಯಾದ ಮಾಹಿತಿ ನೀಡಿದರೆ ಬಹುಮಾನದ ಹಣವನ್ನು ಸಮಾನ ಹಂಚಿಕೆ ಮಾಡಲಾಗುವುದು ಎಂದು ದೇಶದ ಯಾವುದೇ ಭಾಗದ ಜ್ಯೋತಿಷಿಗಳು ಇದರಲ್ಲಿ ಭಾಗವಹಿಸಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next