Advertisement

“ಯಾರು ಬಂದರೂ ಅವರಿಗೆ ಪಕ್ಷಕ್ಕೆ ಪ್ರವೇಶ”: ತೃಣಮೂಲ ಕಾಂಗ್ರೆಸ್

06:19 PM Nov 29, 2021 | Team Udayavani |

ಪಣಜಿ: ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು “ಯಾರು ಬಂದರೂ ಅವರಿಗೆ ಪಕ್ಷಕ್ಕೆ ಪ್ರವೇಶ” ಎಂಬ ಅಭಿಯಾನವನ್ನು ಆರಂಭಿಸಿದೆ. ಸೋಮವಾರ ಪಣಜಿಯ ಟಿಎಂಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ರಾಜ್ಯದ ಕೆಲವೆಡೆ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಟಿಎಂಸಿ ಪಕ್ಷಕ್ಕೆ ಎಂಟ್ರಿ ನೀಡುತ್ತಿದ್ದಾರೆ.

Advertisement

ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರಾದ ಲವೋ ಮಾಮಲೇದಾರ್ ಮಾತನಾಡಿ- ಸದ್ಯ ಗೋವಾದ ಜನತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಬೇಸರಗೊಂಡಿದ್ದಾರೆ. ಈ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡೂ ಪಕ್ಷಗಳ ಬಗ್ಗೆ ಅಸಮಾಧಾನಗೊಂಡ ಜನರು ಹಳ್ಳಿ ಹಳ್ಳಿಯಲ್ಲಿ ಟಿಎಂಸಿ ಪಕ್ಷ ಸೇರುತ್ತಿದ್ದಾರೆ. ಟಿಎಂಸಿ ಪಕ್ಷವು ಗೋವಾದ ಜನರ ಹಿತಕ್ಕಾಗಿ ಕೆಲಸ ಮಾಡುತ್ತಿದೆ ಎಂದರು.

ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿತರಾಗಿದ್ದ ಮಾಜಿ ಶಾಸಕ ಟ್ರೋಜನ್ ಡಿಮೆಲೊ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next