Advertisement

ರೊಹಿಂಗ್ಯಾ ಮುಸ್ಲಿಮರನ್ನು ಮೋದಿ ಯಾಕೆ ಒಪ್ಪಿಕೊಳ್ಳುತ್ತಿಲ್ಲ: ಒವೈಸಿ

02:34 PM Sep 15, 2017 | Team Udayavani |

ಹೈದರಾಬಾದ್: ಭಾರತದಲ್ಲಿ ರೊಹಿಂಗ್ಯಾ ಮುಸ್ಲಿಮರು ನಿರಾಶ್ರಿತರಾಗಿ ಇರಲು ಅವಕಾಶ ಕೊಡದೆ ಗಡಿಪಾರು ಮಾಡಲು ಸಿದ್ಧತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಲ್ ಇಂಡಿಯಾ ಮಜಲಿಸ್ ಎ ಇತ್ತೇಹಾದುಲ್ ಮುಸ್ಲೀಮಿನ್ ಸಂಘಟನೆಯ (ಎಐಎಂಐಎಂ) ವರಿಷ್ಠ ಅಸಾದುದ್ದೀನ್ ಒವೈಸಿ ಕಿರಿಕಾರಿದ್ದಾರೆ.

Advertisement

ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಸಂಸದ ಒವೈಸಿ, ರೊಹಿಂಗ್ಯಾ ನಿರಾಶ್ರಿತರನ್ನು ಮ್ಯಾನ್ಮಾರ್ ಗೆ ವಾಪಸ್ ಕಳುಹಿಸುವ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದಾರೆ. ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಭಾರತದಲ್ಲಿ ನೆಲಸಲು ಅವಕಾಶ ಕೊಡ್ತೀರಿ, ಆದರೆ ರೊಹಿಂಗ್ಯಾ ಮುಸ್ಲಿಮರನ್ನು ಮೋದಿ ಅವರು ಯಾಕೆ ಸಹೋದರರು ಎಂದು ಒಪ್ಪಿಕೊಳ್ಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ವಲಸಿಗರಾಗಿ ಇರುವ ರೊಹಿಂಗ್ಯಾ ಮುಸ್ಲಿಮರು ದೇಶದ ಭದ್ರತೆಗೆ ಮಾರಕ. ಉಗ್ರ ಸಂಘಟನೆ ಐಸಿಸ್‌ ಅವರನ್ನು ದುರ್ಬಳಕೆ ಮಾಡಿಕೊಂಡು ಕುಕೃತ್ಯ ನಡೆಸಲು ಪ್ರೇರಣೆ ನೀಡಬಹುದು. ಹೀಗಾಗಿ ಅವರನ್ನು ಗಡಿಪಾರು ಮಾಡುವ ಕೇಂದ್ರದ ನಿರ್ಧಾರದ ಬಗ್ಗೆ ತಡೆಯೊಡ್ಡಬೇಡಿ. ಹೀಗೆಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next