Advertisement

I-T raids;ಬಿಜೆಪಿಯವರ ಮೇಲೇಕೆ ದಾಳಿಗಳಾಗುತ್ತಿಲ್ಲ:ಸಿದ್ದರಾಮಯ್ಯ ಪ್ರಶ್ನೆ

03:14 PM Dec 10, 2023 | Team Udayavani |

ಬೆಂಗಳೂರು: ಜಾರ್ಖಂಡ್‌ನ ಕಾಂಗ್ರೆಸ್‌ ಸಂಸದ ಧೀರಜ್‌ ಪ್ರಸಾದ್‌ ಸಾಹು ಅವರಿಗೆ ಸೇರಿದ ನಿವೇಶನಗಳಿಂದ 200 ಕೋಟಿ ರೂ.ಗೂ ಅಧಿಕ ಮೊತ್ತದ ಲೆಕ್ಕಕ್ಕೆ ಸಿಗದ ನಗದು ವಶಪಡಿಸಿಕೊಂಡ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಕೇಂದ್ರ ಸರಕಾರವು ಕೇವಲ ಕಾಂಗ್ರೆಸ ನ್ನು ಗುರಿಯಾಗಿಸಿಕೊಂಡಿದೆಯೇ ಹೊರತು ಬಿಜೆಪಿಯಲ್ಲ ಎಂದು ಆರೋಪಿಸಿದ್ದಾರೆ.

Advertisement

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕಾಂಗ್ರೆಸ್ ಅನ್ನು ಮಾತ್ರ ಗುರಿಯಾಗಿಸಿಕೊಂಡಿದೆ. ಬಿಜೆಪಿ ನಾಯಕರ ಮೇಲೂ ರೇಡ್ ಮಾಡಲಿ. ಆಗ ಅವರ ಬಳಿ ಎಷ್ಟು ಅಕ್ರಮ ಸಂಪತ್ತು ಇದೆ ಎಂಬುದು ಗೊತ್ತಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆದಾಯ ತೆರಿಗೆ ಕಾಯ್ದೆ ಪ್ರಕಾರ ಕಪ್ಪುಹಣವನ್ನು ಯಾರು ಕೂಡಿಟ್ಟರೂ ಅದು ತಪ್ಪು. ಐಟಿ ಇಲಾಖೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಆದರೆ, ಕೇಂದ್ರೀಯ ಸಂಸ್ಥೆಗಳು ಆಯ್ದುಕೊಂಡು ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್ ನಾಯಕರನ್ನು ಮಾತ್ರ ಏಕೆ ಗುರಿಯಾಗಿರಿಸಿಕೊಂಡಿದೆ? ಬಿಜೆಪಿಯವರ ಮೇಲೆ ರೇಡ್ ಮಾಡಿದರೂ ಅಪಾರ ಹಣ ಸಿಗುತ್ತದೆ’ ಎಂದು ಸಿಎಂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next