Advertisement

Ram Mandir: ಪ್ರಾಣ ಪ್ರತಿಷ್ಠಾಪನೆ ವೇಳೆ ಪೇಜಾವರ ಸ್ವಾಮೀಜಿ ಮುಖ ಮುಚ್ಚಿದ್ದೇಕೆ?

11:38 PM Jan 22, 2024 | Team Udayavani |

ಅಯೋಧ್ಯೆ: ಒಂದು ಹಂತದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗರ್ಭಗುಡಿಯಲ್ಲಿ ಮುಖ ಮುಚ್ಚಿಕೊಂಡರು. ಅದೇಕೆ ಗೊತ್ತಾ? ರಾಮಲಲ್ಲಾನಿಗೆ ನೈವೇದ್ಯ ಮಾಡುವ ಸಂದರ್ಭದಲ್ಲಿ ದೇವರನ್ನು ನೋಡಬಾರದು ಎಂಬ ಶಾಸ್ತ್ರೀಯ ನಿಯಮ ಇದೆ. ಪ್ರಧಾನಿ ಮೋದಿಯವರು ರಾಮಲಲ್ಲಾನಿಗೆ ಭಕ್ಷ್ಯ ಮತ್ತು ಫ‌ಲಗಳನ್ನು ನೈವೇದ್ಯ ಮಾಡುತ್ತಿದ್ದರು.

Advertisement

ಈ ವೇಳೆ ಮೋದಿ ಸಮೀಪವೇ ಇದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಅಂಗವಸ್ತ್ರದಿಂದ ಮುಖ ಮುಚ್ಚಿಕೊಂಡರು. ಜತೆಗೆ ವಿಧಿವಿಧಾನಗಳು ನಡೆಯುತ್ತಿದ್ದ ವೇಳೆ ಅವರು, ಮಂತ್ರೋಚ್ಛಾರಣೆ ಮಾಡುತ್ತಿದ್ದರು. ಜತೆಗೆ, ಕೆಲ ಸಂದರ್ಭದಲ್ಲಿ ಪ್ರಧಾನಿಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದದ್ದೂ ಕಂಡುಬಂತು.

Advertisement

Udayavani is now on Telegram. Click here to join our channel and stay updated with the latest news.

Next