Advertisement
ದಲಿತ ನಾಯಕರೊಬ್ಬರನ್ನು ಮುಖ್ಯಮಂತ್ರಿಯಾಗಿ ಮಾಡುವ ಬಗ್ಗೆ ಟಿಆರ್ಎಸ್ ವಾಗ್ಧಾನ ಮಾಡಿತ್ತು ಎಂಬ ಶಾ ಟೀಕೆಗೆ ಉತ್ತರಿಸಿದ ಅವರು, “ಕೆಸಿಆರ್ 2014ರಲ್ಲಿ ಅಂಥ ತೀರ್ಮಾನವನ್ನೇ ಕೈಗೊಂಡಿರಲಿಲ್ಲ’ ಎಂದು ತಿರುಗೇಟು ನೀಡಿದ್ದಾರೆ. ಹಿಂದಿನ ಚುನಾವಣೆ ವೇಳೆ ಪಕ್ಷದ ವತಿ ಯಿಂದ ಘೋಷಣೆ ಮಾಡಲಾಗಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿದ್ದೇವೆ ಎಂದು ವಿನೋದ್ ಕುಮಾರ್ ಹೇಳಿಕೊಂಡಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶುಕ್ರವಾರ ಮತ್ತು ಶನಿವಾರ ಛತ್ತೀಸ್ಗಡ ಪ್ರವಾಸ ಕೈಗೊಳ್ಳಲಿದ್ದಾರೆ. ನಾಲ್ಕು ಸ್ಥಳಗಳಲ್ಲಿ ಅವರು ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಬಿಜೆಪಿ ಅಧ್ಯಕ್ಷರು ಮೂರನೇ ಬಾರಿಗೆ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಭ್ಯರ್ಥಿಗಳ ಆಯ್ಕೆಯ ಬಗ್ಗೆಯೂ ಅವರು ಪರಾಮರ್ಶೆ ನಡೆಸಲಿದ್ದಾರೆ. 90 ಸದಸ್ಯರ ವಿಧಾನಸಭೆಗೆ ನ.12, ನ.20ರಂದು ಮತದಾನ ನಡೆಯಲಿದೆ. 2003ರಿಂದ ಬಿಜೆಪಿ ಅಧಿಕಾರದಲ್ಲಿದೆ.
Related Articles
ಮಾಜಿ ಸಿಎಂ ಅಜಿತ್ ಜೋಗಿ ಅವರ ಜನತಾ ಕಾಂಗ್ರೆಸ್ ಛತ್ತೀಸ್ಗಡ (ಜೆಸಿಸಿ)ಜತೆ ಮೈತ್ರಿ ಮಾಡಿಕೊಂಡಿರುವ ಬಿಎಸ್ಪಿ ನಾಯಕಿ ಮಾಯಾವತಿ ಶನಿವಾರ ಜಂಟಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬಿಲಾಸ್ಪುರದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಒಪ್ಪಂದದ ಪ್ರಕಾರ ಬಿಎಸ್ಪಿ 35, ಜೆಸಿಸಿ 55 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿವೆ.
Advertisement