Advertisement

ಬಡಪಾಯಿ ಡಿ-ಗ್ರೂಪ್ ನೌಕರರ ಮೇಲೆ ಪ್ರಯೋಗವೇಕೆ? ಮಂತ್ರಿಗಳು ಲಸಿಕೆ ಪಡೆದು ಮಾದರಿಯಾಗಲಿ:ಖಾದರ್

03:21 PM Jan 16, 2021 | Team Udayavani |

ಬೆಂಗಳೂರು:  ಲಸಿಕೆ ಬಂದಿರುವುದು ಸಂತೋಷ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂದು ಶಾಸಕ ಯುಟಿ ಖಾದರ್ ತಿಳಿಸಿದ್ದಾರೆ.

Advertisement

ಕೋವಿಡ್ ಲಸಿಕೆ ವಿತರಣೆಗೆ ದೇಶಾದ್ಯಂತ ಇಂದು ಚಾಲನೆ ದೊರೆತ ಬೆನ್ನಲ್ಲೆ ಟ್ವೀಟ್ ಮಾಡಿದ ಖಾದರ್, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವುದಕ್ಕಿಂತ ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಅಧಿಕಾರಿಗಳು ಲಸಿಕೆ ಪಡೆಯಲಿ ಎಂದು ಒತ್ತಾಯಿಸಿದ್ದಾರೆ.

ಲಸಿಕೆಯ ಪರಿಣಾಮಕಾರಿತ್ವವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಏತಕ್ಕಾಗಿ ಯಾವುದೇ ಸರ್ಕಾರಿ ಅಧಿಕಾರಿಗಳು ಅಥವಾ ಮಂತ್ರಿಗಳು ಲಸಿಕೆ ಪಡೆಯಲು ಮುಂದಾಗಿಲ್ಲ ಎಂದು ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Advertisement

ಇದನ್ನೂ ಓದಿ: ಅಡ್ಡಪರಿಣಾಮ ಆಗಲಿಲ್ಲ, ಆರೋಗ್ಯವಾಗಿದ್ದೇವೆ: ಕೋವಿಶೀಲ್ಡ್ ಲಸಿಕೆ ಪಡೆದವರ ಅನುಭವ

Advertisement

Udayavani is now on Telegram. Click here to join our channel and stay updated with the latest news.

Next