Advertisement

ಬೇಗ್ ಮೇಲೆ ಬಿಜೆಪಿಗೆ ಅಷ್ಟೊಂದು ಪ್ರೀತಿ ಯಾಕೆ?ದಿನೇಶ್ ಗುಂಡೂರಾವ್

09:13 AM Jul 17, 2019 | Team Udayavani |

ಬೆಂಗಳೂರು: ರೋಷನ್ ಬೇಗ್ ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ಪ್ರೀತಿ ಅಂತ ಗೊತ್ತಿಲ್ಲ. ಐಎಂಎ ಪ್ರಕರಣದಲ್ಲಿ ಬಿಜೆಪಿ ಹೋರಾಟ ನಡೆಸಿತ್ತು. ಈಗ ಬೇಗ್ ಅವರನ್ನು ಅವರೇ ಕರೆದುಕೊಂಡು ಹೋಗುವ ಪ್ರಯತ್ನ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

Advertisement

ಮಂಗಳವಾರ ಕೆಕೆ ಗೆಸ್ಟ್ ಹೌಸ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇಗ್ ಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಿಸಿ ಬಿಜೆಪಿ ನಾಯಕರೇ ಅವರ ಜೊತೆಗೆ ಇದ್ದರು. ಬಿಜೆಪಿ ಯಾವ ಮಟ್ಟಕ್ಕೆ ಇಳಿದಿದೆ ಎಂದು ಇದರಿಂದ ಸ್ಪಷ್ಟವಾಗಿ ಗೊತ್ತಾಗ್ತಿದೆ.  ಅವರಿಗೆ ಸರ್ಕಾರ ಉರುಳಿಸಬೇಕು ಎಂಬುದೇ ಉದ್ದೇಶವಾಗಿದೆ ಎಂದು ದೂರಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಯೇ ಸಾಕು. ನಮ್ಮ ಶಾಸಕರನ್ನು ಸೆಳೆಯಲು ಎಂತಹ ಕೆಲಸ ಮಾಡಿದ್ದಾರೆ ಎಂದು ಆ ಹೇಳಿಕೆ ಹಿಂದೆ ಏನ್ ಇದೆ ಅಂತ ಗೊತ್ತಾಗ್ತಿದೆ ಎಂದರು.

ಯಡಿಯೂರಪ್ಪ ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡ್ತಿದ್ದಾರೆ. ಶಾಸಕರ ಅನರ್ಹತೆ ಮಾಡುವುದಕ್ಕೆ ಬಿಜೆಪಿಯೇ ಮುಂದಾಗಿದೆ. ಶಾಸಕರು ಯಾಕೆ ರಾಜೀನಾಮೆ ನೀಡುತ್ತಿದ್ದಾರೆ ಅಂತ ಬಿಜೆಪಿ ನಡೆಯಿಂದ ಗೊತ್ತಾಗ್ತಿದೆ ಎಂದು ತಿರುಗೇಟು ನೀಡಿದರು.

ನಾವು ವಿಶ್ವಾಸಮತಯಾಚನೆ ಮಾಡುವುದಕ್ಕೆ ಮುಂದಾಗಿದ್ದೇವೆ, ನಮಗೆ ವಿಶ್ವಾಸ ಇದೆ. ನಮ್ಮಲ್ಲಿ ಗೊಂದಲ ಇರಬಾರದು ಅದಕ್ಕೆ ನಾವು ವಿಶ್ವಾಸಮತಯಾಚನೆಗೆ ಮುಂದಾಗಿದ್ದೇವೆ. ನಮಗೆ ವಿಶ್ವಾಸ ಇದೆ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next