Advertisement

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

08:20 PM Oct 18, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯ ನೌಕರ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಭ್ರಷ್ಟಾಚಾರ ಬಯಲಿಗೆ ಎಳೆದರೂ ಬಸವರಾಜ ಬೊಮ್ಮಾಯಿ ಅವರು ಯಾಕೆ ನೈತಿಕ ಹೊಣೆ ಹೊರಲಿಲ್ಲ ಎಂದು ಕಾಂಗ್ರೆಸ್‌ ವಕ್ತಾರ ಹಾಗೂ ಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು ಪ್ರಶ್ನಿಸಿದ್ದಾರೆ.

Advertisement

ವಿಜಯೇಂದ್ರ ಅವರನ್ನು ಹಣಿಯಲು ಬಿಜೆಪಿಯ ಮುಖಂಡರೇ ಈ ದಾಳಿಗೆ ಕಾರಣಕರ್ತರಾಗಿದ್ದು ದಾಳಿಯ ಸುಳಿವು ಮೊದಲೇ ಬಸವರಾಜ ಬೊಮ್ಮಾಯಿಯವರಿಗೆ ತಿಳಿದಿತ್ತು. ತಮ್ಮ ಕಚೇೂ ನೌಕರನೇ ದಾಳಿಗೊಳಗಾಗಿ ಕೋಟ್ಯಂತರ ರೂ. ವಶಕ್ಕೆ ಪಡೆದರೂ ಮೌನವಾಗಿರುವ ಮುಖ್ಯಮಂತ್ರಿಯವರು ಕಾಂಗ್ರೆಸ್‌ನ ನೈತಿಕತೆ ಪ್ರಶ್ನಿಸುವ ಶಕ್ತಿ ಉಳಿಸಿಕೊಂಡಿದ್ದಾರೆಯೇ ಎಂದು ಕೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ

ಬಿಜೆಪಿ ಹೈಕಮಾಂಡ್‌ ಮತ್ತು ಆರ್‌ಎಸ್‌ಎಸ್‌ ನೆರಳಲ್ಲೇ ಮುಖ್ಯಮಂತ್ರಿ ಪದವಿಯನ್ನು ಅನುಭವಿಸುತ್ತಿರುವ ಮುಖ್ಯಮಂತ್ರಿಯವರು ಸಚಿವ ಸಮಪುಟದಲ್ಲಿ ಸಚಿವರ ಸೇರ್ಪಡೆ ಅಥವಾ ಖಾತೆಬದಲಾವಣೆಗೆ ಅಸಹಾಯಕತೆ ತೋರಿ ಕೈಚೆಲ್ಲಿದ ಕಟುಸತ್ಯ ಇಡಿಇ ರಾಜ್ಯದ ಜನ ನೋಡಿದ್ದಾರೆ ಎಂದು ಹೇಳಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next