Advertisement

ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಅಂತ ಈಗ ಯಾಕೆ ಕೇಳುತ್ತಿಲ್ಲ? ಕುಮಾರಸ್ವಾಮಿ

08:50 AM Aug 08, 2019 | Team Udayavani |

ಬೆಂಗಳೂರು: ನಿಖಿಲ್ ಎಲ್ಲಿದ್ದೀಯಪ್ಪಾ ಅಂತ ವಾಟ್ಸಪ್, ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಶ್ನಿಸಿದವರು, ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಇದ್ದರೂ ಯಡಿಯೂರಪ್ಪ ದೆಹಲಿಯಲ್ಲಿದ್ದಾರಲ್ಲ ಈಗ ಯಾಕೆ ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಅಂತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Advertisement

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ನಾನು ನೆಪ ಮಾತ್ರಕ್ಕೆ ಅನಿವಾರ್ಯ ‌ಕಾರಣಕ್ಕೆ ಮುಖ್ಯಮಂತ್ರಿ ಆಗಿದ್ದೆ.‌ ಮತ್ತೊಬ್ಬರ ಮುಲಾಜಿನಲ್ಲಿ ಅಧಿಕಾರ ನಡೆಸುತ್ತಿದ್ದೆ ಎಂದರು.

ಪಕ್ಷದ ಕಚೇರಿಯಲ್ಲಿ ‌ಕಣ್ಣೀರು ಹಾಕಿದ್ದೆ. ಏಕೆಂದರೆ ಪಕ್ಷದ ನಿಷ್ಠಾವಂತರಿಗೆ ನಾನೇ ಮುಖ್ಯಮಂತ್ರಿ ಆಗಿದ್ದರೂ ಅಧಿಕಾರ ಕೊಡಲು ಆಗಲಿಲ್ಲ ಎಂಬ ನೋವು  ನನಗಿತ್ತು ಎಂದು ಈ ಸಂದರ್ಭದಲ್ಲಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಅಸಮಧಾನ ಹೊರಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next