Advertisement

ಡಿ.ಕೆ ಶಿವಕುಮಾರ್ ತಪ್ಪು ಮಾಡಿಲ್ಲವೆಂದರೆ ಭಯ ಏಕೆ ?: ಜಗದೀಶ್ ಶೆಟ್ಟರ್

04:53 PM Sep 11, 2019 | Mithun PG |

ಬೆಳಗಾವಿ:  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಯಾವುದೇ ತಪ್ಪು ಮಾಡಿಲ್ಲ ಎಂದರೆ ಭಯವಿಲ್ಲದೆ ವಿಚಾರಣೆ ಎದುರಿಸಲಿ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

Advertisement

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದದ ಅವರು ಡಿ ಕೆ ಶಿವಕುಮಾರ್ ತಪ್ಪು ಮಾಡಿದ್ದಾರೆ ಎಂದೇ ಅವರ ವ್ಯವಹಾರಗಳ ಎಲ್ಲ ದಾಖಲಾತಿ ಗಳನ್ನು ಸಂಗ್ರಹಿಸಿ ವಿಚಾರಣೆ ನಡೆಯುತ್ತಿದೆ. ತಪ್ಪು ಮಾಡಿರದಿದ್ದರೆ ವಿಚಾರಣೆ ಎದುರಿಸಲು ಏಕೆ ಭಯ ಎಂದರು.

ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗಳು ಸ್ವಾಯತ್ತ ಸಂಸ್ಥೆಗಳು. ಈ ಸಂಸ್ಥೆಗಳಲ್ಲಿ ಶಿವಕುಮಾರ್ ಅವರಿಗೆ ಕಾನೂನಿನಲ್ಲಿ ರಿಯಾಯಿತಿ ತೋರಿಸಲು ಬರುವುದಿಲ್ಲ. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಇದರಲ್ಲಿ ರಾಜಕೀಯ ಮಾಡುವುದು ಹಾಗೂ ಪ್ರತಿಭಟನೆ ನಡೆಸುವುದು ಸರಿಯಾದ ಕ್ರಮ ಅಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next