Advertisement

Heart attack ನಿಂದ ಪತ್ನಿ ಸಾವು: ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

08:17 PM Feb 29, 2024 | Team Udayavani |

ಉಳ್ಳಾಲ: ಹೃದಯಾಘಾತದಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿಯ ಸಾವಿನ ಸುದ್ಧಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ನಡೆದಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಗ್ರಾಮ ಚಾವಡಿ ನಿವಾಸಿ ಮೀನಾಕ್ಷಿ ಪೂಜಾರಿ(59) ಮತ್ತು ಅವರ ಪತಿ ತೊಕ್ಕೊಟ್ಟು ಒಳಪೇಟೆ ನಿವಾಸಿ ಪ್ರಸ್ತುತ ಗ್ರಾಮಚಾವಡಿಯಲ್ಲಿ ವಾಸವಾಗಿರುವ ಶೇಷಪ್ಪ ಪೂಜಾರಿ(63) ಮೃತರು. ಮೀನಾಕ್ಷಿ ಅವರು ಸ್ಥಳೀಯ ಸ್ವಿಚ್‍ಬೋರ್ಡ್ ತಯಾರಿಕಾ ಸಂಸ್ಥೆಯಲ್ಲಿ ಕೆಲಸಕ್ಕಿದ್ದರೆ, ಶೇಷಪ್ಪ ಪೂಜಾರಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಘಟನೆಯ ವಿವರ
ಮೀನಾಕ್ಷಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಮೀನಾಕ್ಷಿ ಆವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಪತಿ ಶೇಷಪ್ಪ ಪೂಜಾರಿ ಮತ್ತು ಅವರ ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದರು. ರಾತ್ರಿ ಮನೆಗೆ ವಾಪಾಸ್ಸಾಗಿದ್ದ ಶೇಷಪ್ಪ ಪೂಜಾರಿ ಅವರು ಬುಧವಾರ ಬೆಳಗ್ಗಿನಿಂದಲೇ ಪತ್ನಿಯ ಅನಾರೋಗ್ಯದಿಂದ ಚಿಂತಿತರಾಗಿದ್ದರು. ಬೆಳಗ್ಗೆ ವಾಪಾಸ್ ಆಸ್ಪತ್ರೆಗೆ ತೆರಳಿ ಸಂಜೆ ವಾಪಾಸ್ ಆಗಿದ್ದರು. ಸಂಜೆ ವೇಳಗೆ ಶೇಷಪ್ಪ ಆವರು ಮನೆಯೊಳಗಿದ್ದ ಸಂದರ್ಭದಲ್ಲಿ ಮೀನಾಕ್ಷಿ ಅವರ ಸಾವಿನ ಸುದ್ಧಿಯನ್ನು ಸಂಬಂಧಿಕರೊಬ್ಬರು ತಿಳಿಸಿ ಪಕ್ಕದ ಅಂಗಡಿಗೆ ತೆರಳಿ ವಾಪಾಸಾದಾಗ ಶೇಷಪ್ಪ ಅವರು ಕೀಟನಾಶಕವನ್ನು ಕುಡಿದಿದ್ದು, ಪಕ್ಕದ ಅಂಗಡಿಯವರು ಮತ್ತು ಸಂಬಂಧಿಕರು ಕೀಟನಾಶಕವನ್ನು ಎಳೆದು ತೆಗೆದರೂ ಅದಾಗಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಮೀನಾಕ್ಷಿ ತನ್ನ ಪತಿ ಶೇಷಪ್ಪಪೂಜಾರಿ ಮತ್ತು ಮೀನಾಕ್ಷಿಯ ಸಹೋದರಿ ಮತ್ತು ಅವರ ಪತಿಯೂ ಒಂದೇ ಮನೆಯಲ್ಲಿ ವಾಸವಾಗಿದ್ದು, ಮಕ್ಕಳಿಲ್ಲದ ಕೊರಗು ಮತ್ತು ಅನಾರೋಗ್ಯದಿಂದ ಬೇಸತ್ತು ಪತ್ನಿ ಸಾವಿನ ಕೆಲವೇ ಗಂಟೆಯಲ್ಲಿ ತನ್ನ ಜೀವನವನ್ನು ಕೊನೆಗಾಣಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next