Advertisement

ಬಂಟ್ವಾಳ: ಕತ್ತಿಯಿಂದ ಹಲ್ಲೆ ನಡೆಸಿ ಗಂಡನನ್ನೇ ಕೊಂದ ಪತ್ನಿ! ಪೊಲೀಸ್ ವಶಕ್ಕೆ

10:48 AM Mar 06, 2021 | Team Udayavani |

ಬಂಟ್ವಾಳ: ಕತ್ತಿಯಿಂದ ಹಲ್ಲೆ ನಡೆಸಿ ಪತ್ನಿಯೇ ಗಂಡನನ್ನು ಕೊಲೆ ಮಾಡಿದ ಘಟನೆಯೊಂದು ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರ ಗ್ರಾಮದಲ್ಲಿ ನಡೆದಿದೆ.

Advertisement

ನಾವೂರ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಗಂಡನ ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಸೇಸಪ್ಪ ಅವರು ಕೂಲಿ ಕೆಲಸ ಮಾಡುತ್ತಿದ್ದು ದಿನ ಮನೆಯಲ್ಲಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆಯುತ್ತಿತ್ತು.ಮಾ.3 ರಂದೂ ರಾತ್ರಿ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು, ಹೆಂಡತಿ ಮನೆಯಲ್ಲಿದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು.

ಇದನ್ನೂ ಓದಿ:ಕಬಡ್ಡಿ ಪಂದ್ಯಾವಳಿಯಲ್ಲಿ ಮಾರಾಮಾರಿ ಪ್ರಕರಣ: ಶಾಸಕ ಸಂಗಮೇಶ್ ಪುತ್ರನ ಬಂಧನ

ಸೇಸಪ್ಪ ಅವರಿಗೆ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ಆದರೆ ಮಾ.5 ರಂದು ಸಂಜೆ ಹುಷಾರಿಲ್ಲ ಎಂದು ಮಲಗಿದ್ದ ಸೇಸಪ್ಪ ಅಲ್ಲಿಯೇ ಮೃತಪಟ್ಟಿದ್ದಾರೆ.

Advertisement

ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತ್ರತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜಕೀಯ ಷಡ್ಯಂತ್ರ ನಡೆಯುತ್ತಿದೆ, ಅದಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಸಚಿವ ಸುಧಾಕರ್

Advertisement

Udayavani is now on Telegram. Click here to join our channel and stay updated with the latest news.

Next