Advertisement

ಸಾಂಬಾರಿನಲ್ಲಿ ಉಪ್ಪು ಹೆಚ್ಚಾಗಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ!

09:47 AM May 12, 2020 | mahesh |

ಪಾತಪಾಳ್ಯ: ಸಾಂಬಾರಿನಲ್ಲಿ ಉಪ್ಪು ಹೆಚ್ಚಾಗಿದೆ ಎಂದು ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಚೇಳೂರು ಗ್ರಾಪಂ ವ್ಯಾಪ್ತಿಯ ಹೊಸಹುಡ್ಯ(ಉಪ್ಪಕುಂಟಪಲ್ಲಿ)ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮಧುರ(24) ಕೊಲೆಯಾಗಿರುವ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಬಾಲಚಂದ್ರ
(28) ಖಾಸಗಿ ಬಸ್‌ ಚಾಲಕನಾಗಿದ್ದ ಎನ್ನಲಾಗಿದ್ದು, ಮಧುರಾಳನ್ನು ಪ್ರೀತಿಸಿ ಮದುವೆಯಾಗಿದ್ದ. ಈತ ಮದ್ಯವೆಸನಿಯಾಗಿದ್ದ ಹಿನ್ನೆಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಆಗಾಗ ಹೆಂಡತಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ಭಾನುವಾರ ಸಾಂಬಾರಿನಲ್ಲಿ ಉಪ್ಪು ಹೆಚ್ಚಾಗಿದೆ ಎಂದು ಹೆಂಡತಿ ಜತೆ ಜಗಳವಾಡಿದ್ದಾನೆ. ನಂತರ ತಡರಾತ್ರಿ ರೂಮಿನಲ್ಲಿ ಪತ್ನಿಯ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next