Advertisement

ಅರಂತೋಡು: ಕೆರೆಗೆ ಬಿದ್ದ ಮೂರು ಕಾಡಾನೆ; ಸೆರೆ ಹಿಡಿದು ಸ್ಥಳಾಂತರಕ್ಕೆ ಸ್ಥಳೀಯರ ಆಗ್ರಹ

08:00 AM Apr 13, 2023 | Team Udayavani |

ಅರಂತೋಡು : ತೋಟಕ್ಕೆ ನುಗ್ಗಿದ್ದ ಕಾಡಾನೆಗಳ ಹಿಂಡು ತೋಟದಲ್ಲಿನ ಕೆರೆಗೆ ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಎ.12ರ ಬುಧವಾರ ರಾತ್ರಿ ನಡೆದಿದೆ.

Advertisement

ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಕೆರೆಗೆ  ರಾತ್ರಿ ಮೂರು ಕಾಡಾನೆಗಳು ಕೆರೆಗೆ ಬಿದ್ದಿವೆ. ಆಹಾರ ಅರಸುತ್ತಾ ಬಂದಿದ್ದ ಕಾಡಾನೆಗಳು ತೋಟದಲ್ಲಿ ಕೆಲ ಕೃಷಿ ಪುಡಿಗೈದಿದ್ದು, ಬಳಿಕ ಆಯತಪ್ಪಿ ಬಿದ್ದಿವೆ.  ಕೆರೆಗೆ ಬಿದ್ದ ಆನೆಗಳಿಗೆ ಮೇಲೆ ಬರಲು ಸಾಧ್ಯವಾಗದೆ ಪರಿತಪಿಸುತ್ತಿವೆ. ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಸ್ಥಳಾಂತರಕ್ಕೆ ಆಗ್ರಹ:

ಕೆರೆಗೆ ಬಿದ್ದಿರುವ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸ್ಥಳೀಯರು ಪಟ್ಟು ಹಿಡಿದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಅಧಿಕಾರಿಗಳು ಯಾವ ಕ್ರಮಕೈಗೊಳ್ಳಲಿದ್ದಾರೆ ಎಂಬುದು ತಿಳಿದು ಬರಬೇಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next