Advertisement

ಅಸ್ವಸ್ಥ ಆನೆ ಮತ್ತೆ ಪತ್ತೆ; ಚಿಕಿತ್ಸೆ ನೀಡಲಾಗದೆ ಕೈಚೆಲ್ಲಿದ ವೈದ್ಯರು

11:28 PM Apr 27, 2023 | Team Udayavani |

ಕಡಬ: ಕಳೆದ ಕೆಲವು ದಿನಗಳಿಂದ ಬಿಳಿನೆಲೆಯ ಚೇರು ಹಾಗೂ ಎರ್ಮಾಯಿಲು ಪ್ರದೇಶದಲ್ಲಿ ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಗಂಡು ಕಾಡಾನೆ ಗುರುವಾರ ಬೆಳಗ್ಗೆ ಕೊಂಬಾರಿನ ಕೆಂಜಾಳ ಬಗ್ಪುಣಿ ಭಾಗದ ಹೊಳೆಯ ನೀರಿನಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಮತ್ತೆ ಕಂಡುಬಂದಿದೆ.

Advertisement

ಸುದ್ದಿ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ನಿಶ್ಶಕ್ತಿಯಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಹೊಳೆಯಲ್ಲಿಯೇ ನಿಂತಿದ್ದ ಆನೆಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಕಡಬದ ಪಶು ವೈದ್ಯಾಧಿಕಾರಿ ಡಾ| ಅಜಿತ್‌ ಹಾಗೂ ಹುಣಸೂರಿನಿಂದ ಅರಣ್ಯ ಇಲಾಖೆಯ ಪಶು ವೈದ್ಯ ಡಾ| ಮುಜೀಬ್‌ ಅವರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಆನೆಯನ್ನು ಪರಿಶೀಲಿಸಿದ ಅವರು ಅದಕ್ಕೆ ಸುಮಾರು 50 ವರ್ಷ ಪ್ರಾಯವಾಗಿದ್ದು, ಬಾಯಿಯಲ್ಲಿ ಗಾಯವಾಗಿರುವಂತಿದೆ ಎಂದಿದ್ದಾರೆ. ವಯಸ್ಸು ಮತ್ತು ಅನಾರೋಗ್ಯದ ಕಾರಣ ಅದಕ್ಕೆ ಸರಿಯಾಗಿ ಆಹಾರ ಸೇವಿಸಲು ಸಾಧ್ಯವಾಗುತ್ತಿಲ್ಲ. ಚಿಕಿತ್ಸೆ ನೀಡಬೇಕಾದರೆ ಅರಿವಳಿಕೆ ನೀಡಿ ಪ್ರಜ್ಞೆ ತಪ್ಪಿಸಬೇಕಿದೆ. ಆದರೆ ಅದು ಅರಿವಳಿಕೆಯನ್ನು ತಡೆದುಕೊಳ್ಳಲು ಸಾಧ್ಯವಾಗದಷ್ಟು ನಿಶ್ಶಕ್ತವಾಗಿರು ವುದರಿಂದಾಗಿ ಅರಿವಳಿಕೆ ಪ್ರಯೋಗ ಸಾಧ್ಯವಿಲ್ಲ. ಒಂದು ವೇಳೆ ಈ ಸ್ಥಿತಿಯಲ್ಲಿ ಅರಿವಳಿಕೆ ಪ್ರಯೋಗಿಸಿದರೆ ಅದರ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಆನೆ ಸಂಜೆಯ ವೇಳೆಗೆ ಕಷ್ಟುಪಟ್ಟು ಹೊಳೆಯಿಂದ ಮೇಲಕ್ಕೆ ಬಂದು ಅರಣ್ಯದೊಳಕ್ಕೆ ಹೋಗಿದೆ. ನಮ್ಮ ಸಿಬಂದಿ ಅದರ ಚಲನವಲನಗಳ ಬಗ್ಗೆ ನಿಗಾ ಇರಿಸಿದ್ದಾರೆ ಎಂದು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ ಕೋತಿ… 10ಕ್ಕೂ ಹೆಚ್ಚು ಜನರಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next