Advertisement

ಮಡಿಕೇರಿ : ಹಾಡಹಗಲೇ ಸಂಚರಿಸಿ ಆತಂಕ ಸೃಷ್ಟಿಸಿರುವ ಕಾಡಾನೆಗಳ ಹಿಂಡು

11:59 AM Aug 06, 2022 | Team Udayavani |

ಮಡಿಕೇರಿ : ಅಭ್ಯತ್‌ ಮಂಗಲ ವ್ಯಾಪ್ತಿಯಲ್ಲಿ ಹಾಡಹಗಲೇ ಸಂಚರಿಸುತ್ತಿರುವ ಕಾಡಾನೆಗಳ ಹಿಂಡು ಆತಂಕವನ್ನು ಸೃಷ್ಟಿಸಿದೆ. ಬಹುತೇಕ ಗದ್ದೆಗಳು ಹಾಗೂ ತೋಟಗಳು ಅವುಗಳ ದಾಳಿಯಿಂದ ನಾಶವಾಗಿವೆ.

Advertisement

ಒಂದು ವಾರದಿಂದ ಈ ಭಾಗದಲ್ಲಿ ಮರಿಯಾನೆಗಳೊಂದಿಗೆ ಗಂಡಾನೆ ಹಾಗೂ ಹೆಣ್ಣಾನೆ ಸಂಚರಿಸುತ್ತಿದ್ದು, ಮುಖ್ಯ ರಸ್ತೆಯ ಮೂಲಕ ಗದ್ದೆ, ತೋಟಗಳಿಗೆ ಲಗ್ಗೆ ಇಡುತ್ತಿವೆ.

ಶುಕ್ರವಾರ ಅಂಚೆಮನೆ ಸುಧಿ ಹಾಗೂ ಆದರ್ಶ ಅವರ ಗದ್ದೆಗಳಿಗೆ ನುಗ್ಗಿದ ಆನೆಗಳ ಹಿಂಡು ಸಾಕಷ್ಟು ಹಾನಿ ಮಾಡಿದೆ. 15 ದಿನಗಳ ಹಿಂದೆಯಷ್ಟೇ ಭತ್ತದ ಬಿತ್ತನೆ ಮಾಡಿದ್ದು, ಮುಂದಿನ ವಾರ ನಾಟಿ ಮಾಡಲು ತಯಾರಿ ನಡೆಸು ತ್ತಿರು ವಾಗಲೇ ಎಲ್ಲವೂ ನಾಶವಾಗಿವೆ. ಅಂಚೆಮನೆ ಕುಟುಂಬದ ಕಾಫಿ ಮತ್ತು ಅಡಿಕೆ ತೋಟಕ್ಕೂ ಹಾನಿ ಯಾದೆ.

ರಸ್ತೆಯಲ್ಲೇ ಸಂಚಾರ!
ಸಂಜೆಯಾಗುತ್ತಲೇ ರಸ್ತೆಗಳಲ್ಲಿ ಕಾಡಾನೆ ಗಳ ಹಿಂಡಿನ ಸಂಚಾರ ಕಂಡು ಬರುತ್ತಿದ್ದು, ಶಾಲೆ ಬಿಟ್ಟು ಮನೆಗೆ ಬರುವ ಮಕ್ಕಳು, ಕಾರ್ಮಿಕರು ಭಯ ಗೊಂಡಿ ದ್ದಾರೆ. ಅತ್ತಿಮಂಗಲದಿಂದ ಒಂಟಿಯಂಗಡಿ ವರೆಗೆ ಬೀದಿದೀಪ ಗಳಿಲ್ಲ. ಕಾರ್ಗತ್ತಲಿನಲ್ಲಿ ಕಾಡಾನೆಗಳು ಸಂಚರಿ ಸುವಾಗ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು ವಿಶ್ವವಿದ್ಯಾನಿಲಯ : ತುರ್ತಾಗಿ ಫಲಿತಾಂಶ ನೀಡಲು “ಆದ್ಯತೆ ಪರೀಕ್ಷೆ’ ಸೂತ್ರ!

Advertisement
Advertisement

Udayavani is now on Telegram. Click here to join our channel and stay updated with the latest news.

Next