Advertisement

Elephant: ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಮೃತ್ಯು, ಇಲಾಖೆ ವಿರುದ್ಧ ಸ್ಥಳಿಯರ ಆಕ್ರೋಶ

08:45 AM Nov 08, 2023 | Team Udayavani |

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟಕ್ಕೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ನಡೆದಿದೆ.

Advertisement

ಮೃತ ಮಹಿಳೆಯನ್ನು ವೀಣಾ (45) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲ್ದೂರು ವಲಯದ ಅರಣ್ಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಇಂದು ಬೆಳಿಗ್ಗೆ ವೀಣಾ ಅವರು ತೋಟಕ್ಕೆ ಕೆಲಸಕ್ಕೆ ಹೋಗುವಾಗ ದಾಳಿ ನಡೆಸಿದೆ ಪರಿಣಾಮ ಗಂಭೀರ ಗಾಯಗೊಂಡ ವೀಣಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆನೆಗಳನ್ನ ಓಡಿಸುವಂತೆ ಪ್ರತಿಭಟನೆ ನಡೆಸಿದ ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Advertisement

ಸ್ಥಳಕ್ಕೆ ಆಲ್ದೂರು ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂಓದಿ: Maheswar Mohanty: ಒಡಿಶಾ ವಿಧಾನಸಭೆಯ ಮಾಜಿ ಸ್ಪೀಕರ್ ಮಹೇಶ್ವರ್ ಮೊಹಾಂತಿ ನಿಧನ

Advertisement

Udayavani is now on Telegram. Click here to join our channel and stay updated with the latest news.

Next