Advertisement

ಸಕಲೇಶಪುರ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

09:32 AM Aug 08, 2022 | Team Udayavani |

ಸಕಲೇಶಪುರ: ತಾಲೂಕಿನಲ್ಲಿಒಂದೆಡೆ ಸುರಿಯುತ್ತಿರುವ ಮಳೆಯಾದರೆ, ಮತ್ತೊಂದೆಡೆ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಯಿಂದ ಅಮಾಯಕ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಸುಳ್ಳಕ್ಕಿ‌ ಸಮೀಪ ನಡೆದಿದೆ.

Advertisement

ಮಂಜುನಾಥ್ ಆಲಿಯಾಸ್ ಕೆಂಪಣ್ಣ (53) ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ.

ತಾಲೂಕಿನ ಸುಳ್ಳಕ್ಕಿ ಸಮೀಪದ ಮೇಲಕೆರೆಯಲ್ಲಿ ಮಂಜುನಾಥ್ ಬೆಳಗ್ಗೆ ಗದ್ದೆ ಕೆಲಸಕ್ಕೆ ಗದ್ದೆಗೆ ಹೋಗುವಾಗ ಏಕಾಏಕಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಆತ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಕಾಡಾನೆಗಳು ಮನುಷ್ಯರನ್ನು ಬಲಿ ಪಡೆಯುತ್ತಿದ್ದು ಕಳೆದ 2 ದಿನಗಳ ಹಿಂದಷ್ಟೆ ಹೆತ್ತೂರು ಹೋಬಳಿ ಕಲ್ಲುತೋಟದಲ್ಲಿ ರಾಮಕೃಷ್ಣ ಎಂಬವರನ್ನು ಕಾಡಾನೆಯೊಂದು ತುಳಿದು ಹಾಕಿತ್ತು. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ಸಂಬಂಧಿಕರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ತಿಂಗಳ‌ ಅಂತರದಲ್ಲಿ ಕಾಡಾನೆಗಳಿಗೆ ಇದು ಮೂರನೇ ಬಲಿಯಾಗಿದ್ದು, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಕಾಡಾನೆಗಳಿಂದಾಗಿ ನಿತ್ಯವೂ ಭಯದ ವಾತಾವಣದಲ್ಲಿ ಜೀವನ ನಡೆಸುವ ಪರಿಸ್ಥಿತಿ ಮಲೆನಾಡಿನಲ್ಲಿ‌ ನಿರ್ಮಾಣವಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next