Advertisement

Hanur: ಕಾಡಾನೆ ದಾಳಿ; ವ್ಯಕ್ತಿ ಸ್ಥಳದಲ್ಲೇ ಸಾವು

10:22 AM Jul 10, 2023 | Team Udayavani |

ಹನೂರು: ಪೊರಕೆ ಕಡ್ಡಿ ಸಂಗ್ರಹಣೆಗಾಗಿ ಅರಣ್ಯಕ್ಕೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಸಮೀಪದ ಆಲದ ಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

Advertisement

ಹನೂರು ತಾಲೂಕಿನ ಮಾಳಿಗನತ್ತ ಗ್ರಾಮದ ಗುರುಸ್ವಾಮಿ ರವರ ಪುತ್ರ ಪ್ರಭುಸ್ವಾಮಿ (55) ಮೃತ ದುರ್ದೈವಿ.

ಮೃತ ಪ್ರಭುಸ್ವಾಮಿ ತನ್ನ ಪುತ್ರ ಚಂದ್ರುವಿನ ಜೊತೆ ಪೊರಕೆ ಕಡ್ಡಿ ಸಂಗ್ರಹಣೆಗಾಗಿ ಮಲೆ ಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ತೆರಳಿದ್ದ. ಈ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮೃತ ದೇಹವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ, ಅರಣ್ಯ ಇಲಾಖಾ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next