Advertisement

Sakleshpura: ಕಾಡಾನೆ ದಾಳಿಗೆ ಮಹಿಳೆ ಬಲಿ

02:56 PM Aug 18, 2023 | Team Udayavani |

ಸಕಲೇಶಪುರ: ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.

Advertisement

ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಡೂರು ಗ್ರಾಮದ ಕವಿತಾ (40) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ.

ವಡೂರು ಗ್ರಾಮದಲ್ಲಿ ತನ್ನ ಅಮ್ಮನನ್ನು ನೋಡಲೆಂದು ಬಂದಿದ್ದ ಕವಿತಾ ಅವರನ್ನು ಮನೆ ಬಳಿ ಇದ್ದಾಗಲೇ ಕಾಡಾನೆ ಅಟ್ಟಾಡಿಸಿಕೊಂಡು ಬಂದಿದ್ದು, ಕೆಳಗೆ ಬಿದ್ದ ಕವಿತಾರ ಮೇಲೆ ಆನೆ ದಾಳಿ ಮಾಡಿತ್ತು.

ಕವಿತಾ ಅವರ ಸೊಂಟದ ಭಾಗ ತುಳಿದಿದ್ದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ನಾರ್ವೇ ಮೂಲದ ಕವಿತಾ ಪತಿ ಬೈರಯ್ಯ ಇತ್ತೀಚೆಗೆ ನಿಧನ ಹೊಂದಿದ್ದರು. ಇವರಿಗೆ ಮೂವರು ಗಂಡು ಮಕ್ಕಳಿದ್ದಾರೆ.

Advertisement

ಸಕಲೇಶಪುರ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸತತವಾಗಿ ಜೀವ ಹಾನಿ ಸಂಭವಿಸುತ್ತಲೇ ಇವೆ. ಕಾಡಾನೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಬೆಳೆಗಾರರ ಸಂಘಟನೆ ಮತ್ತು ರೈತ ಸಂಘಟನೆಗಳು ಆಗ್ರಹಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next