Advertisement

ರಾಮನಗರ : ಚೌತಿಯ ದಿನವೇ ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

11:02 AM Sep 10, 2021 | Team Udayavani |

ರಾಮನಗರ: ಗಣೇಶ ಹಬ್ಬದ ದಿನವೇ ಒಂಟಿ ಸಲಗವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

Advertisement

35-40 ವರ್ಷದ ಗಂಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಸಮೀಪದ ಎನ್.ಆರ್. ಕಾಲೋನಿ ಗ್ರಾಮದ ಪಕ್ಕದ ತೋಟದಲ್ಲಿ ಈ ಘಟನೆ ನಡೆದಿದೆ.

ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಆನೆಗಳ ಗುಂಪಿನಲ್ಲಿ ಈ ಒಂಟಿ ಸಲಗ ಮಾತ್ರ ತಂತಿಗೆ ಅಳವಡಿಸಿದ್ದ ವಿದ್ಯುತ್ ಸಂಪರ್ಕದ ಶಾಕ್ ನಿಂದ ಸಾವನ್ನಪ್ಪಿದೆ.

ಮೊದಲು ಸಲಗ ವಿದ್ಯುತ್ ಸ್ಪರ್ಶದಿಂದ ಕಿರುಚಿದಾಗ ಈ ಆನೆಯ ಜೊತೆ ಬಂದಿದ್ದ ಇತರೆ ಆನೆಗಳು ಪಲಾಯನ ಮಾಡಿವೆ.

ಇದನ್ನೂ ಓದಿ :ಹಾರಾಡಿ ಸಂಪರ್ಕ ರಸ್ತೆಯಲ್ಲಿ ಸಂಚಾರವೇ ನರಕ ಸದೃಶ

Advertisement

ಕಳೆದ ತಿಂಗಳು ಕಬ್ಬಾಳು ಅರಣ್ಯದಲ್ಲಿ 35 ವರ್ಷದ ಗಂಡಾನೆಯೊಂದು ಮೃತಪಟ್ಟಿತ್ತು. ಈ ಬೆನ್ನಲ್ಲೆ ಈ ಆನೆ ಕೂಡ ಮೃತಪಟ್ಟಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲೆ ಮರಣೋತ್ತರ ಪರೀಕ್ಷೆ ನಡೆಸಿ ಅಂತಿಮ ಸಂಸ್ಕಾರ ಕೂಡ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next