ಮೂಡಿಗೆರೆ: ಮಲೆನಾಡಿನಲ್ಲಿ ಒಂದೆಡೆ ಮಳೆಯ ಆರ್ಭಟ ಜೋರಾಗಿದ್ದು, ಇನ್ನೊಂದೆಡೆ ಕಾಡಾನೆ ಪುಂಡಾಟವೂ ಹೆಚ್ಚಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೆಟ್ಟಿಗೆರೆ ಗ್ರಾಮದ ಅಣ್ಣಿ ಪೂಜಾರಿಯವರ ತೋಟಕ್ಕೆ ಭಾನುವಾರ ರಾತ್ರಿ ಕಾಡಾನೆಗಳು ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ತೋಟದಲ್ಲಿ ಬೆಳೆದು ನಿಂತಿದ್ದ ಕಾಫಿ ಅಡಿಕೆ, ಮೆಣಸು, ತೆಂಗು, ಏಲಕ್ಕಿ ಮೊದಲಾದ ಬೆಳೆಗಳನ್ನು ನಾಶ ಮಾಡಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇದನ್ನೂ ಓದಿ: ಕನ್ಹಯ್ಯಾ ಲಾಲ್ ಹತ್ಯೆ: ಭಾರಿ ಮಳೆಯಲ್ಲಿಯೂ ಬಣಕಲ್-ಕೊಟ್ಟಿಗೆಹಾರದಲ್ಲಿ ಪ್ರತಿಭಟನೆ
ಮಲ್ನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು ರೈತರು ಅರಣ್ಯ ಇಲಾಖೆಗೆ ಹಿಡಿ ಶಾಪ ಹಾಕುವಂತಾಗಿದೆ.
ಇತ್ತೀಚಿಗೆ ಕಾಡಾನೆಗಳ ಕಾಟ ಹೆಚ್ಚಾಗಿದ್ದು ಜನರು ಓಡಾಡಲು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಕಾಡಾನೆಗಳನ್ನು ಸ್ಥಳಾಂತರಿಸಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ.