Advertisement

ಮಡಿಕೇರಿ: ವಿದ್ಯುತ್ ತಂತಿ ಸ್ಪರ್ಶಗೊಂಡು ಕಾಡಾನೆಗಳು ಸಾವು

12:47 PM Jul 25, 2022 | Team Udayavani |

ಮಡಿಕೇರಿ: ವಿದ್ಯುತ್ ತಂತಿ ಸ್ಪರ್ಶಗೊಂಡು ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಅತ್ತಿಮಂಗಲದ ಕಾಫಿ ತೋಟದಲ್ಲಿ ನಡೆದಿದೆ.

Advertisement

ಒಂದು ಗಂಡಾನೆ ಹಾಗೂ ಮತ್ತೊಂದು ಹೆಣ್ಣಾನೆ ಮೃತಪಟ್ಟಿದೆ. 11 ಕೆವಿ ವಿದ್ಯುತ್ ತಂತಿ ಕೆಳಭಾಗದಲ್ಲಿ ಹಾದು ಹೋಗಿರುವುದರಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾಡಾನೆಗಳ ಸಾವಿಗೆ ಗ್ರಾಮಸ್ಥರು ಹಾಗೂ ವನ್ಯಜೀವಿ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next