Advertisement

ನೂಜಿಬಾಳ್ತಿಲದಲ್ಲಿ ಕಾಡಾನೆ ಪತ್ತೆ: ಶೋಧ ಕಾರ್ಯ ಚುರುಕು

11:51 PM Feb 26, 2023 | Team Udayavani |

ಸುಬ್ರಹ್ಮಣ್ಯ: ಕಡಬ ತಾಲೂಕಿನ ಕಲ್ಲುಗುಡ್ಡೆ-ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರಿಗೆ ರವಿವಾರ ಬೆಳಗ್ಗೆ ಕಾಣಿಸಿದೆ.

Advertisement

ಅವರ ನೀಡಿದ ಮಾಹಿತಿಯನು ಸಾರ ಅರಣ್ಯ ಇಲಾಖೆಯ ತಂಡವು ಕಾಡಾನೆ ಪತ್ತೆ ಕಾರ್ಯವನ್ನು ಮತ್ತೆ ಚುರುಗೊಳಿಸಿದೆ. ಅಡೆಂಜ, ಬಳಕ್ಕ, ಇಚಿಲಡ್ಕ, ನಿಡ್ಡೋ ಅರಣ್ಯ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಲಾಯಿತು.

ಕಡಬ ತಾಲೂಕಿನ ರೆಂಜಿಲಾಡಿಯ ಮೀನಾಡಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಸ್ಥಳೀಯರ ಆಗ್ರಹದಂತೆ 5 ಸಾಕಾನೆ ಗಳ ನೆರವಿನಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿದ್ದು ಮೂರನೇ ದಿನದ ಕಾರ್ಯಾಚರಣೆಯಲ್ಲಿ ನರಹಂತಕ ಕಾಡಾನೆಯನ್ನು ಕೊಂಬಾರು ಬಳಿ ಸೆರೆಹಿಡಿದು ನಾಗರಹೊಳೆ ಸಾಕಾನೆ ಶಿಬಿರಕ್ಕೆ ಸಾಗಿಸಲಾಗಿದೆ. ಬಾಕಿ ಇರುವ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next