Advertisement

ಮೂಡಿಗೆರೆ ತಾಲೂಕಿನಲ್ಲಿ ಆನೆಗಳ ಹಾವಳಿ : ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ

02:05 PM Sep 11, 2022 | Team Udayavani |

ಕೊಟ್ಟಿಗೆಹಾರ : ಮಲೆನಾಡಿನ ಚಾರಣಿಗರ ನೆಚ್ಚಿನ ತಾಣ ಎತ್ತಿನ ಭುಜಕ್ಕೆ ನಿರ್ಬಂಧ ಮಲೆನಾಡಿನ ಅನೇಕ ಗ್ರಾಮಗಳಲ್ಲಿ ನಿರಂತರ ಆನೆ ದಾಳಿ ನಡೆಯುತ್ತಿದೆ.

Advertisement

ಅಲ್ಲಿಯ ಜನರು ಆತಂಕಗೊಂಡಿದ್ದಾರೆ. ಮೂಡಿಗೆರೆ ತಾಲೂಕಿನ ಎತ್ತಿನಭುಜ ವ್ಯಾಪ್ತಿಯಲ್ಲಿ ಆನೆಗಳು ಕಾಣಿಸಿಕೊಂಡಿರುವ ಹಿನ್ನಲೆ ಪ್ರಸಿದ್ಧ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯ ಚಿಕ್ಕಮಗಳೂರು ಪ್ರಾದೇಶಿಕ ವಿಭಾಗ ಎತ್ತಿನ ಭುಜ ಚಾರಣ ವನ್ನು ತಾತ್ಕಾಲಿಕ ನಿಷೇಧಿಸಿದೆ.

ಮೂಡಿಗೆರೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಎರಡು ದಿನ ಹಿಂದೆ ಒರ್ವ ಕೂಲಿ ಕಾರ್ಮಿಕನನ್ನು ಕಾಲಿನಿಂದ ತುಳಿದು ಸ್ಥಳದಲ್ಲಿಯೇ ಕೊಂದು ಹಾಕಿರುವ ಘಟನೆ ನಡೆದಿದೆ.

ಈ ಘಟನಾ ಸಂಭಂದ ವ್ಯಾಪಕವಾದ ವಿರೋಧ ಸ್ಥಳೀಯರಿಂದ ವ್ಯಕ್ತವಾಗಿತ್ತು. ಹಾಗೂ ಸ್ಥಳೀಯರು ಮತ್ತು ಸಾರ್ವಜನಿಕರಿಂದ ಮೃತ ದೇಹವನ್ನು ಮೂಡಿಗೆರೆ ಅರಣ್ಯ ಇಲಾಖೆ ಎದುರುಗಡೆ ಇಟ್ಟು ಪ್ರತಿಭಟನೆ ನಡೆಸಿದ್ದರು.

Advertisement

ಪ್ರತಿಭಟನೆ ತೀವ್ರಗೊಂಡ ಹಿನ್ನಲೆ, ಆನೆಯನ್ನು ಹಿಡಿಯುವ ಭರವಸೆ ಅರಣ್ಯ ಇಲಾಖೆಯಿಂದ ಸಿಕ್ಕಿದಂತಾಗಿದೆ. ಆನೆಗಳು ಈ ಭಾಗದಲ್ಲಿ ಓಡಾಡುತ್ತಲೇ ಇರುವುದರಿಂದ ಯಾವುದೇ ರೀತಿಯ ದುರ್ಘಟನೆ ಸಂಭವಿಸದೆ ಇರಲಿ ಎಂದು ಮುನ್ನೆಚ್ಚರಿಕ ಕ್ರಮವಾಗಿ ಎತ್ತಿನಭುಜ ಚಾರಣಕ್ಕೆ ನಿಷೇಧ ಹೇರಲಾಗಿದೆ.

ಕಾಡಾನೆಗಳು ಈ ಭಾಗದಲ್ಲಿ ತಿರುಗಾಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಗೂ ಸ್ಥಳೀಯರ ಒತ್ತಾಯದ ಮೇರೆಗೆ ಅಂತೆಯೇ ಮೇಲಧಿಕಾರಿಗಳ ನಿರ್ದೇಶನದಂತೆ ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ-

– ಮೋಹನ್ ಕುಮಾರ್, ಮೂಡಿಗೆರೆ ವಲಯ ಅರಣ್ಯಾಧಿಕಾರಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next