Advertisement

ಸುಬ್ರಹ್ಮಣ್ಯ : ಕೆದಿಲ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ : ಆತಂಕದಲ್ಲಿ ಸ್ಥಳೀಯರು

09:50 PM Apr 07, 2021 | Team Udayavani |

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಿಂದ ಐನಕಿದು ಕಲ್ಮಕಾರು, ಕೊಲ್ಲಮೊಗ್ರು, ಹರಿಹರ,ಬಾಳುಗೋಡು ಈ ಭಾಗಕ್ಕೆ ಸಂಪರ್ಕಿಸುವ ಮಲೆಯಾಳ ಐನಕಿದು ರಸ್ತೆಯ ಕೆದಿಲ ಬಳಿ ರಸ್ತೆಯಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ವಾಹನ ಸವಾರರು ಆತಂಕಕ್ಕೊಳಗಾದ ಘಟನೆ ನಡೆದಿದೆ.

Advertisement

ಇಂದು ಸಂಜೆ ಸಂಜೆ 8ರ ವೇಳೆಗೆ  8 ಆನೆಗಳಿರುವ ಹಿಂಡು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಮೂಡಿಸಿವೆ. ಈ ಮಾರ್ಗ ಕಾಡಿನೊಳಗೆ ಹಾದು ಹೋಗಿದ್ದು ದಾರಿ ಮಧ್ಯೆ ಯಾವುದೆ ಮನೆಗಳು ಇಲ್ಲ. ಆನೆಗಳ ಉಪಟಳದಿಂದ ಸ್ಥಳಿಯರಲ್ಲಿ ಆತಂಕ ಸ್ರಷ್ಟಿಯಾಗಿದೆ. ಸುಬ್ರಹ್ಮಣ್ಯದಿಂದ ಈ ಮಾರ್ಗವಾಗಿ ತೆರಳುವವರು ಎಚ್ಚರಿಕೆ ವಹಿಸುವಂತೆ ಸ್ಥಳೀಯರು ಸೂಚಿಸಲಾಗುತ್ತಿದೆ.

ಇನ್ನು ಇಂದು ಕಲ್ಮಕಾರು ಕಾಡಿನ ದಾರಿಯಲ್ಲಿ ತೆರಳಿದ್ದ ವೃದ್ಧನೋರ್ವ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮ್ರತ ಪಟ್ಟಿದ್ದಾರೆ. ಈ ಘಟನೆ ಮಾಸುವ ಮುನ್ನವೆ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

 

( ಕಾಡಾನೆ ದಾಳಿಗೆ ಬಲಿಯಾದ ವೃದ್ಧ)

Advertisement
Advertisement

Udayavani is now on Telegram. Click here to join our channel and stay updated with the latest news.

Next