Advertisement

ನಾಗರಹೊಳೆಯಲ್ಲಿ ಕಾಡುಕೋಣ ಬೇಟೆ, ಇಬ್ಬರ ಬಂಧನ

09:15 AM Oct 22, 2022 | Team Udayavani |

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡುಕೋಣ ಬೇಟೆಯಾಡಿದ್ದ ಇಬ್ಬರು ಬೇಟೆಗಾರರನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದು, ಉಳಿದ ಏಳು ಮಂದಿ ತಲೆ ಮರೆಸಿಕೊಂಡಿದ್ದಾರೆ ಎಮದು ತಿಳಿದು ಬಂದಿದೆ.

Advertisement

ಪಿರಿಯಾಪಟ್ಟಣ ತಾಲೂಕಿನ ಉದ್ಯಾನವನದಂಚಿನ ಲಕ್ಷ್ಮೀಪುರ ನಿವಾಸಿಗಳಾದ ಅಶೋಕ, ಕಾಟಿಚಂದ್ರ ಬಂಧಿತರು.

ಘಟನೆ ವಿವರ:

ಅ.15ರ ರಾತ್ರಿ ಉದ್ಯಾನದ ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ಆನೆ ಚೌಕೂರು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಕೋಣ ಬೇಟೆಯಾಡಿ ನಾಲ್ಕು ತೊಡೆಗಳು ಹಾಗೂ ಮಾಂಸವನ್ನು ಹೊತ್ತೊಯ್ದಿದ್ದರು. ಈ ಸಂಬಂಧ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತಲಾಷ್ ನಡೆಸುತ್ತಿದ್ದರು.

ಆರೋಪಿಗಳ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಲಿ ಯೋಜನೆ ನಿರ್ದೇಶಕ ಹರ್ಷ ಕುಮಾರ್ ನರಗುಂದ, ಎಸಿಎಫ್ ದಯಾನಂದ್ ಮಾರ್ಗದರ್ಶನದಲ್ಲಿ ಆರ್.ಎಫ್.ಓ.ಗಳಾದ ರತನ್‌ ಕುಮಾರ್. ಗಣರಾಜ ಪಟಗಾರ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ ವೇಳೆ ಆನೆ ಚೌಕೂರು ವಲಯದಂಚಿನ ಲಕ್ಷ್ಮೀಪುರ ಗ್ರಾಮದಲ್ಲಿ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಡಿಸಿಎಫ್ ಹರ್ಷಕುಮಾರ್ ನರಗುಂದ ಉದಯವಾಣಿಗೆ ತಿಳಿಸಿದ್ದಾರೆ.

Advertisement

ತಲೆಮರೆಸಿಕೊಂಡಿರುವ ಮನು, ಬೊಮ್ಮ, ಭರತ್, ಆನಂದ್, ಶೇಷಮ್ಮನ ಜಯ, ರಾಮಕೃಷ್ಣೇಗೌಡ, ಮಂಜು ಪತ್ತೆಗೆ ತಂಡ ರಚಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಹುಣಸೂರು ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿಗಳಾದ ರತನ್‌ಕುಮಾರ್. ಗಣರಾಜಪಟಗಾರ, ಡಿ.ಆರ್.ಎಫ್.ಓ ಗಳಾದ ಪ್ರಸನ್ನಕುಮಾರ್, ಎನ್.ಕೆ.ವೀರಭದ್ರ, ರಾಮು, ಮನೋಹರ್. ಅರಣ್ಯ ರಕ್ಷಕರಾಗಳಾದ ಲಾಲ್ ಮಹಮದ್, ಕೃಷ್ಣ, ಕುಶಲ್, ವಾಹನ ಚಾಲಕ ಶಿವು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next