Advertisement

ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ: ಗೋವಿಂದ ಕಾರಜೋಳ

04:01 PM Jan 12, 2021 | Team Udayavani |

ಬಾಗಲಕೋಟೆ: ರಾಮಕೃಷ್ಣ ಹೆಗಡೆ ಅವರ ದೂರದೃಷ್ಠಿಯ ಫಲವಾಗಿ ಇಡೀ ದೇಶಕ್ಕೆ ಮಾದರಿಯಾದ ಪಂಚಾಯತ್ ರಾಜ್ ವ್ಯವಸ್ಥೆ ನಮ್ಮ ರಾಜ್ಯದಲ್ಲಿತ್ತು. ಆದರೆ ವೀರಪ್ಪ ಮೋಯ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ಪಂಚಾಯತ್ ವ್ಯವಸ್ಥೆಯ ಅರಿವಿಲ್ಲದೆ ಅವಿವೇಕಿತನದ ನಿರ್ಧಾರದಿಂದ ಈ ವ್ಯವಸ್ಥೆಯೇ ಕುಲಗೆಟ್ಟಿತು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಗೊಳಿಸಲು ಚರ್ಚೆ ನಡೆಸುತ್ತಿದ್ದು, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

Advertisement

ನಗರದಲ್ಲಿ ಬುಧವಾರ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜನ ಸೇವಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಪಂಚಾಯತ್ ರಾಜ್ ನಲ್ಲಿ ಮೊದಲು ಎರಡು ಹಂತದ ವ್ಯವಸ್ಥೆಯಿತ್ತು. ಜಿಲ್ಲಾ ಪರಿಷತ್ ಮತ್ತು ಮಂಡಲ ಪಂಚಾಯತ್ ವ್ಯವಸ್ಥೆ ಇದ್ದಾಗ ಗ್ರಾಮೀಣ ಅಭಿವೃದ್ದಿಗೆ ಬಹಳಷ್ಟು ಅನುದಾನ, ಶಿಸ್ತುಬದ್ಧ ವ್ಯವಸ್ಥೆಯಿತ್ತು. ರಾಮಕೃಷ್ಣ ಹೆಗಡೆ ಅವರು ಈ ವ್ಯವಸ್ಥೆಯನ್ನು ಇಡೀ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೊಳಿಸಿದಾಗ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಕೇಂದ್ರದ ತಂಡ ಕಳುಹಿಸಿ ಅಧ್ಯಯನ ಮಾಡಿಸಿದ್ದರು. ಇಂತಹ ವ್ಯವಸ್ಥೆಯನ್ನು ವೀರಪ್ಪ ಮೋಯ್ಲಿ ಕುಲಗೆಡೆಸಿದರು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಸತತ ಸೋಲಿನಿಂದ ಕಾಂಗ್ರೆಸ್‌ ಅಧೋಗತಿಗೆ; ಜನ ಸೇವಕ ಸಮಾವೇಶಕ್ಕೆ ಚಾಲನೆ

Advertisement

ಪಂಚಾಯತ್ ವ್ಯವಸ್ಥೆ ಇಂದು ಮೂರು ಹಂತದಲ್ಲಿದೆ. ತಾಲೂಕು ಪಂಚಾಯತ್ ಗೆ ಯಾವುದೇ ರೀತಿಯ ಅನುದಾನವಿಲ್ಲ. ಆದರೂ ತಾ.ಪಂ ವ್ಯವಸ್ಥೆ ಜಾರಿಯಲ್ಲಿದ್ದು, ಇದರಿಂದ ಅಭಿವೃದ್ದಿಗಿಂತ ಹೊರೆಯೇ ಹೆಚ್ಚು. ಹೀಗಾಗಿ ತಾ.ಪಂ. ವ್ಯವಸ್ಥೆ ರದ್ದುಗೊಳಿಸಿ, ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆದಿದ್ದು, ಶೀಘ್ರವೇ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಕಾರಜೋಳ ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next