Advertisement

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

02:58 PM Mar 28, 2024 | Kavyashree |

ಹುಬ್ಬಳ್ಳಿ: ಸಂಸದನಾಗಿ ನಾನು ಇಲ್ಲಿಯವರೆಗೆ ವೀರಶೈವ- ಲಿಂಗಾಯತ ಸಮಾಜವನ್ನು ಕಡೆಗಣಿಸುವ ಇಲ್ಲವೆ ಅನ್ಯಾಯ ಮಾಡುವ ಕೆಲಸ ಮಾಡಿಲ್ಲ. ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ, ನನ್ನಿಂದ ತಪ್ಪಾಗಿದ್ದರೆ ಅವರ ಕ್ಷಮೆ ಕೇಳುವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 7 ಕ್ಷೇತ್ರದಲ್ಲಿ ವೀರಶೈವ-ಲಿಂಗಾಯತ ಸಮಾಜದವರಿಗೆ ಟಿಕೆಟ್ ನೀಡಲಾಗಿತ್ತು. ದಿಂಗಾಲೇಶ್ವರ ಸ್ವಾಮೀಜಿ ನನಗೆ ಸಾಕಷ್ಟು ಬಾರಿ ಆಶೀರ್ವಾದ ಮಾಡಿದ್ದಾರೆ. ಆ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇನೆ. ಸ್ವಾಮೀಜಿಯವರ ಹೇಳಿಕೆ ಬಗ್ಗೆ ಹೆಚ್ಚಿನ ರೀತಿ ಪ್ರತಿಕ್ರಿಸಲು ಬಯಸುವುದಿಲ್ಲ ಎಂದರು.

ಟಿಕೆಟ್ ವಿಚಾರದಲ್ಲಿ ಪಕ್ಷದಲ್ಲಿನ ಬಂಡಾಯ ಬಹುತೇಕ ಶಮನವಾಗಿದ್ದು, ರಾಯಚೂರು ನಲ್ಲಿ ಬಂಡಾಯ ಶಮನ ಯತ್ನ ನಡೆದಿದೆ. ಧಾರವಾಡದ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದೊಂದಿಗೆ ಸಮನ್ವಯ ಸಭೆ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next