Advertisement

ಏನೇ ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ: ಈಶ್ವರಪ್ಪ

02:44 PM Sep 03, 2021 | Team Udayavani |

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂಬ ಅಮಿತ್ ಶಾ ಹೇಳಿಕೆಗೆ ಬಿಜೆಪಿ ನಾಯಕರಲ್ಲೇ ಭಿನ್ನಸ್ವರ ಎದ್ದಿದೆ. ಇದೀಗ ಸಚಿವ ಕೆ.ಎಸ್.ಈಶ್ವರಪ್ಪ ಕೂಡಾ ದನಿಗೂಡಿಸಿದ್ದು,  ಅಮಿತ್ ಶಾ ಹೇಳಿದ್ದಾರೆ ಹೌದು, ಯಾವ ರೀತಿ ಹೇಳಿದ್ದಾರೆ ಗೊತ್ತಿಲ್ಲ.  ಸಾಮೂಹಿಕ ನಾಯಕತ್ವದ ಬಗ್ಗೆ ಖಂಡಿತಾ ನಮ್ಮೆಲ್ಲರ ಒಲವಿದೆ. ಎಲ್ಲರೂ ಕೂತು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮೂಹಿಕ ನಾಯಕತ್ವದಲ್ಲಿ ಬೊಮ್ಮಾಯಿಯವರ ಪಾತ್ರವೂ ಇರುತ್ತದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಂಘಟನೆ ಕಟ್ಟುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದೇವೆ. ಏನೇ ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ ಎಂದರು.

ಇದನ್ನೂ ಓದಿ:ಬೆಳಗಾವಿ ಪಾಲಿಕೆಯ ಮೇಲೆ ಯಾರ ಹಿಡಿತವೂ ಇಲ್ಲ: ಬಿಜೆಪಿ ವಿರುದ್ಧ ಹೆಬ್ಬಾಳ್ಕರ್ ಟೀಕೆ

ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿಯಲ್ಲಿ ಚುನಾವಣೆ ನಡೆಯುತ್ತಿದೆ. ನಾನು ಕೂಡ ಆ ಭಾಗಕ್ಕೆ ಹೋಗಿ ಬಂದಿದ್ದೇನೆ. ಅಲ್ಲಿಯ ಜನತೆ ಬಿಜೆಪಿಯ ಜೊತೆಗೆ ಇದ್ದಾರೆ. ಕಾರ್ಯಕರ್ತರು ತುಂಬಾ ಉತ್ಸಾಹದಲ್ಲಿ ಕೆಲಸ ಮಾಡಿದ್ದಾರೆ. ಮೂರು ಮಹಾನಗರ ಪಾಲಿಕೆಯಲ್ಲಿ ಪೂರ್ಣ ಬಹುಮತವನ್ನು ಬಿಜೆಪಿ ಪಡೆಯಲಿದೆ ಎಂದು ಸಚಿವ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next