Advertisement

ಸಿದ್ದರಾಮಯ್ಯಗೆ ಕ್ಷೇತ್ರ ಬಿಟ್ಟುಕೊಡುವೆ: ಜಮೀರ್‌ ಖಾನ್‌ 

09:04 PM Dec 16, 2022 | Team Udayavani |

ಮಂಡ್ಯ: ಚಾಮರಾಜಪೇಟೆಗೆ ಸಿದ್ದರಾಮಯ್ಯ ಬಂದರೆ ಸ್ವಾಗತ. ಸಿದ್ದರಾಮಯ್ಯ ಅವರನ್ನು ರಾಜ್ಯದ ಜನ ಬಯಸುತ್ತಿದ್ದು, ಅವರಿಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ಧನಿದ್ದೇನೆ ಎಂದು ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಪ್ರಚಾರ ಈಗಾಗಲೇ ಪ್ರಾರಂಭವಾಗಿದ್ದು, ಕಾಂಗ್ರೆಸ್‌ ಪಕ್ಷ ಚುರುಕಿನಿಂದ ಚುನಾವಣೆ ತಯಾರಿ ಮಾಡಿಕೊಳ್ಳುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಸರಣಿ ಸಮಾವೇಶಗಳನ್ನು ಮಾಡುತ್ತಿದ್ದು, ಅಲ್ಪಸಂಖ್ಯಾತರ ಸಮಾವೇಶ ನಡೆಸುವ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.

ಮಂಗಳೂರು ಕುಕ್ಕರ್‌ ಪ್ರಕರಣ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಜಮೀರ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next