Advertisement

ಬುಕ್ ಆಫ್ ಲಾ ಪ್ರಕಾರ ಜಾರಕಿಹೊಳಿ ಪ್ರಕರಣ ತನಿಖೆ: ಬಸವರಾಜ ಬೊಮ್ಮಾಯಿ

12:11 PM Mar 09, 2021 | keerthan |

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಿಚಾರಣೆ ಕಾನೂನು ಪ್ರಕಾರ ನಡೆಯುತ್ತದೆ ಎಂದರು.

ದೂರು ಬಂದ ನಂತರ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಎಲ್ಲವನ್ನೂ ಕಾನೂನು ಪ್ರಕಾರ ತನಿಖೆಗೆ ಒಳಪಡಿಸಲಾಗುವುದು ಎಂದರು.

ಇದನ್ನೂ ಓದಿ:ಕಾಂಗ್ರೆಸ್ ನಿಂದ ಮುಂದುವರಿದ ಬಹಿಷ್ಕಾರ: ಸಿಎಂ ಬಂದು ಕಾದರು ಸಭೆಗೆ ಬಾರದ ಸಿದ್ದರಾಮಯ್ಯ!

ಸಿಡಿ ಪ್ರಕರಣದ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಈ ಸಿಡಿ ಸಂಪೂರ್ಣ ನಕಲಿಯಾಗಿದೆ. ಬೆಂಗಳೂರಿನಲ್ಲಿ ಎರಡು ಕಡೆ ಷಡ್ಯಂತ್ರ ಆಗಿದೆ. ನನ್ನ ರಾಜಕೀಯ ಏಳಿಗೆ ಸಹಿಸದ 2+3+4 ಇದ್ದಾರೆ ಎಂದು ಆರೋಪಿಸಿದ್ದರು.

Advertisement

ಈ ಪ್ರಕರಣದಲ್ಲಿ ಆ ಹೆಣ್ಣು ಮಗಳಿಗೆ 5 ಕೋಟಿ ಕೊಟ್ಟಿದ್ದಾರೆ. ಅವಳಿಗೆ ದುಬೈನಲ್ಲಿ ಫ್ಲಾಟ್ ಕೊಟ್ಟಿದ್ದಾರೆ. ಷಡ್ಯಂತ್ರ ಮಾಡಿದವರನ್ನು ಜೈಲಿಗೆ ಹಾಕಿಸುವುದೇ ನನ್ನ ಗುರಿ. ಅವರು ಎಷ್ಟೇ ದೊಡ್ಡ ಪ್ರಭಾವಿ ಇರಲಿ, ಎಷ್ಟೇ ಖರ್ಚಾಗಲಿ ಅವರನ್ನು ಜೈಲಿಗೆ ಹಾಕಿಸದೇ ಬಿಡುವುದಿಲ್ಲ ಎಂದು ಗುಡುಗಿದ್ದರು.

ಇದನ್ನೂ ಓದಿ: ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ

Advertisement

Udayavani is now on Telegram. Click here to join our channel and stay updated with the latest news.

Next