Advertisement

Maratha community ಮೀಸಲಾತಿ ಕುರಿತು ಶಾಶ್ವತ ನಿರ್ಧಾರ ಕೈಗೊಳ್ಳುತ್ತೇವೆ: ಫಡ್ನವಿಸ್

07:46 PM Oct 23, 2023 | Shreeram Nayak |

ನಾಗ್ಪುರ: ‘ಮೀಸಲಾತಿಗಾಗಿ ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಇತ್ತೀಚೆಗೆ ಆಂದೋಲನ ನಡೆಸುತ್ತಿರುವ ಮರಾಠರಿಗೆ ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರವು  ಶಾಶ್ವತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ’ ಎಂದು  ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು  ಸೋಮವಾರ ಭರವಸೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, ಈ ಗಂಭೀರ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರವು ಶ್ರಮಿಸುತ್ತದೆ. ಮೊದಲು ನಮ್ಮ ಸರ್ಕಾರ ಮೀಸಲಾತಿ ಕೊಟ್ಟಿದ್ದು ಎಲ್ಲರಿಗೂ ಗೊತ್ತೇ ಇದೆ.ಸುಪ್ರೀಂ ಕೋರ್ಟ್ ನಲ್ಲಿ ಅದು ಸುಸ್ಥಿರವಾಗಿತ್ತು.ನಮ್ಮ ಸರ್ಕಾರ ಇರುವವರೆಗೂ ಅಮಾನತು ಮಾಡಿರಲಿಲ್ಲ ನಿನ್ನೆ ಮರಾಠಾ ಸಮುದಾಯಕ್ಕೆ ಸರ್ಕಾರ ಮೀಸಲಾತಿ ನೀಡುವುದಾಗಿ ಸಿಎಂ ಏಕನಾಥ್ ಶಿಂಧೆ ಭರವಸೆ ನೀಡಿದ್ದಾರೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದರು.

ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಂಡು ಮುಂದೆ ನ್ಯಾಯಾಲಯದ ಮೆಟ್ಟಿಲೇರಿದರೆ ಟೀಕೆ ಎದುರಿಸಬೇಕಾಗುತ್ತದೆ ಎಂದರು.

“ಸಂವಿಧಾನ, ನ್ಯಾಯಾಂಗ ಇತ್ಯಾದಿಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಿರ್ಧಾರಗಳನ್ನು ಚಿಂತನಶೀಲವಾಗಿ ತೆಗೆದುಕೊಳ್ಳಬೇಕು, ಇಂದು ತೆಗೆದುಕೊಂಡ ಆತುರದ ನಿರ್ಧಾರ ನಾಳೆ ನ್ಯಾಯಾಲಯದಲ್ಲಿ ನಿಲ್ಲದಿದ್ದರೆ, ಟೀಕೆಗಳು ಎದುರಾಗುತ್ತವೆ, ಆದ್ದರಿಂದ ನಾವು ಶಾಶ್ವತ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಅವರು ಹೇಳಿದರು.

ತಮ್ಮ ಸರ್ಕಾರ ಮರಾಠ ಸಮುದಾಯದ ಜತೆಗೆ ನಿಂತಿದೆ ಮತ್ತು ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ಬದ್ಧವಾಗಿದೆ, ಮೀಸಲಾತಿ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next