Advertisement

ಬಿಜೆಪಿ ಕಡೆಗೆ ಗುತ್ತೆದಾರ್‌ ಒಲವು ?

06:45 AM Mar 27, 2018 | |

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಅಫ‌jಲ್‌ಪುರ ಶಾಸಕ ಮಾಲಿಕಯ್ಯ ಗುತ್ತೆದಾರ್‌ ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.

Advertisement

ಕಲಬುರಗಿ ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ತಮ್ಮನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನ ನಡೆಸಿದ್ದಾರೆಂದು ರಾಹುಲ್‌ ಗಾಂಧಿ ಭೇಟಿಗೆ ಪ್ರಯತ್ನಿಸಿದ್ದರು. ಅನೇಕ ಬಾರಿ ರಾಹುಲ್‌ ರಾಜ್ಯಕ್ಕೆ ಆಗಮಿಸಿದರೂ, ಸಿಎಂ ಸಿದ್ದರಾಮಯ್ಯ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಮಾಲಿಕಯ್ಯ ಗುತ್ತೆದಾರ್‌ ಬೇಸರಗೊಂಡಿದ್ದಾರೆ ಎನ್ನಲಾಗಿದೆ. 

ರಾಹುಲ್‌ ಭೇಟಿಗೆ ಅವಕಾಶ ದೊರೆಯದಿದ್ದರೆ ಅಧಿಕೃತವಾಗಿ ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಗುತ್ತೆದಾರ್‌ ಆಪ್ತ ಮೂಲಗಳು ತಿಳಿಸಿವೆ. ಈ ಮಧ್ಯೆ ಮಾಲಿಕಯ್ಯ ಗುತ್ತೆದಾರ್‌ ಅವರನ್ನು ಜೆಡಿಎಸ್‌ಗೆ ಬರುವಂತೆ ದೇವೇಗೌಡರು ಆಹ್ವಾನಿಸಿದ್ದರು. ಆದರೆ, ರಾಷ್ಟ್ರೀಯ; ಪಕ್ಷವೊಂದರಲ್ಲಿ ಇದ್ದರೆ ಸೂಕ್ತ ಎಂದು ಬಿಜೆಪಿ ಪರ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಆರು ಬಾರಿ ಗೆಲುವು ಸಾಧಿಸಿದ್ದರೂ ಸಚಿವ ಸ್ಥಾನ ನೀಡದೆ ಮೊದಲ ಬಾರಿ ಶಾಸಕರಾಗಿರುವ ಪ್ರಿಯಾಂಕ್‌ ಖರ್ಗೆಗೆ ಸಚಿವ ಸ್ಥಾನ ನೀಡಿದ್ದರಿಂದ ಆರು ತಿಂಗಳ ಹಿಂದೆಯೇ ಗುತ್ತೇದಾರ್‌ ಮುನಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next